8:23 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಚಿತ್ರದುರ್ಗದ ಟಿ.ಸುಮಾ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ: ಆಟೋ ಡ್ರೈವರ್ ಮಗಳು ಜಡ್ಜ್ ; ಅಪರೂಪದ ಸಾಧನೆಗೆ ಕೋಟೆನಾಡು ಸಾಕ್ಷಿ

27/02/2024, 17:59

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ರಾಜ್ಯದ ನೂತನ ಸಿವಿಲ್ ನ್ಯಾಯಾಧೀಶರಾಗಿ 33 ಯುವ ವಕೀಲರು ನೇಮಕವಾಗಿದ್ದಾರೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಯುವತಿ ಟಿ.ಸುಮಾ ಕೂಡಾ ಪರಿಶ್ರಮದಿಂದ ನ್ಯಾಯಾಧೀಶರಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.
2023 ನವೆಂಬರ್ ನಲ್ಲಿ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆ, 2024 ಜನವರಿಯಲ್ಲಿ ನಡೆದಿದ್ದ ಮೌಖಿಕ ಪರೀಕ್ಷೆಯ ಅಂಕಗಳನ್ನು ಆಧರಿಸಿ 33 ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ ಮಾಡಲಾಗಿದೆ.
ಚಿತ್ರದುರ್ಗ ನಗರಕ್ಕೆ ಹೊಂದಿಕೊಂಡಿರುವ ಕೋಡೆನಹಟ್ಟಿಯ ತಿಪ್ಪೇಸ್ವಾಮಿ ಭಾಗ್ಯಮ್ಮ ದಂಪತಿ ಪುತ್ರಿ ಟಿ.ಸುಮಾ ಮೂರನೇ ಪ್ರಯತ್ನದಲ್ಲಿ ನ್ಯಾಯಾಧೀಶರಾಗಿ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ.
ಮಠದ ಕುರುಬರಹಟ್ಟಿಯ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಪೂರೈಸಿರುವ ಟಿ.ಸುಮಾ, ಎಸ್‍ಜೆಎಂ ಮಹಿಳಾ ಕಾಲೇಜಿನಲ್ಲಿ ಪದವಿ ಅಧ್ಯಯನ ಮಾಡಿದ್ದಾರೆ.
ಆನಂತರ ನಗರದ ಸರಸ್ವತಿ ಕಾನೂನು ಕಾಲೇಜಿನಲ್ಲಿ 2020-21ರಲ್ಲಿ ಕಾನೂನು ಪದವಿ ಪಡೆದುಕೊಂಡಿದ್ದಾರೆ.
ಕಾನೂನು ಪದವಿ ಪೂರೈಸಿದ ನಂತರ 2021ರಲ್ಲೇ ನ್ಯಾಯಾಧೀಶರ ಪರೀಕ್ಷೆ ಬರೆದಿದ್ದು, ಸಂದರ್ಶನದಲ್ಲಿ ಪ್ರಯತ್ನ ವಿಫಲವಾಗಿತ್ತು.2022 ರಲ್ಲಿ ಮರಳಿ ಯತ್ನ ಮಾಡಲು ಪರೀಕ್ಷೆ ಕಟ್ಟಿದ ವೇಳೆಯೇ ಅನಾರೋಗ್ಯ ಬಾಧಿಸಿದ ಕಾರಣಕ್ಕೆ ಮೇನ್ಸ್ ಪರೀಕ್ಷೆಗೆ ಹಾಜರಾಗಲಿಲ್ಲ. ಶಸ್ತ್ರಚಿಕಿತ್ಸೆಯ ನಂತರ 2023ರಲ್ಲಿ ಛಲ ಬಿಡದೇ ಮತ್ತೆ ಪರೀಕ್ಷೆ ಬರದಿದ್ದಾರೆ. ಮೂರನೇ ಪ್ರಯತ್ನದಲ್ಲಿ ನ್ಯಾಯಾಧೀಶರಾಗುವ ಮೂಲಕ ತಮ್ಮ ಗುರಿ ತಲುಪಿದ್ದಾರೆ.
*ಕುಟುಂಬದ ಹಿನ್ನೆಲೆ:*
ಸುಮಾ ಅವರ ತಂದೆ ಆಟೋ ಚಾಲಕರು, ತಾಯಿ ಗೃಹಿಣಿ, ಇವರಿಗೆ ಅಣ್ಣ, ಅಕ್ಕ ಹಾಗೂ ಓರ್ವ ತಮ್ಮ ಇದ್ದಾರೆ. ಎಲ್ಲರೂ ಎಸ್ಸೆಸ್ಸೆಲ್ಸಿ, ಐಟಿಐ ವರೆಗೆ ಓದಿ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದಾರೆ. ಕುಟುಂಬದಲ್ಲಿ ಪದವಿ ಶಿಕ್ಷಣ ಪಡೆದಿರುವ ಏಕೈಕ ಯುವತಿ ಸುಮಾ. ಆನಂತರ ನಗರದ ಸರಸ್ವತಿ ಕಾನೂನು ಕಾಲೇಜಿನಲ್ಲಿ 2020-21ರಲ್ಲಿ ಕಾನೂನು ಪದವಿ ಪಡೆದುಕೊಂಡಿದ್ದಾರೆ.
ಕಾನೂನು ಪದವಿ ಪೂರೈಸಿದ ನಂತರ 2021ರಲ್ಲೇ ನ್ಯಾಯಾಧೀಶರ ಪರೀಕ್ಷೆ ಬರೆದಿದ್ದು, ಸಂದರ್ಶನದಲ್ಲಿ ಪ್ರಯತ್ನ ವಿಫಲವಾಗಿತ್ತು.
2022 ರಲ್ಲಿ ಮರಳಿ ಯತ್ನ ಮಾಡಲು ಪರೀಕ್ಷೆ ಕಟ್ಟಿದ ವೇಳೆಯೇ ಅನಾರೋಗ್ಯ ಬಾಧಿಸಿದ ಕಾರಣಕ್ಕೆ ಮೇನ್ಸ್ ಪರೀಕ್ಷೆಗೆ ಹಾಜರಾಗಲಿಲ್ಲ. ಶಸ್ತ್ರಚಿಕಿತ್ಸೆಯ ನಂತರ 2023ರಲ್ಲಿ ಛಲ ಬಿಡದೇ ಮತ್ತೆ ಪರೀಕ್ಷೆ ಬರದಿದ್ದಾರೆ. ಮೂರನೇ ಪ್ರಯತ್ನದಲ್ಲಿ ನ್ಯಾಯಾಧೀಶರಾಗುವ ಮೂಲಕ ತಮ್ಮ ಗುರಿ ತಲುಪಿದ್ದಾರೆ.
*ಜಡ್ಜ್ ಆಗುವ ಕನಸು:*
ತುಂಬಾ ಶ್ರಮಪಟ್ಟು ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಶಿಕ್ಷಣ ಮುಗಿಸಿ, ಸರಸ್ವತಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆಯಲು ಸೇರಿದಾಗಲೇ ನಾನು ನ್ಯಾಯಾಧೀಶೆ ಆಗಬೇಕು ಎಂಬ ಗುರಿಯನ್ನು ಸುಮಾ ಹಾಕಿಕೊಂಡಿದ್ದಾರೆ
ನ್ಯಾಯಾವಾದಿಗಳಾದ ಎಂ.ಸಿ.ಪಾಪಣ್ಣ ಅವರ ಮಾರ್ಗದರ್ಶನದಲ್ಲಿ ಮುಂದುವರೆದು, ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದ ಪರಿಣಾಮ ಅಂದು ಕಂಡಿದ್ದ ಕನಸು ಇಂದು ನನಸಾಗಿದೆ.
ಯಾರು ಕಠಿಣ ಪರಿಶ್ರಮದಿಂದ ಸಾಧನೆ ಮಾಡುತ್ತಾರೋ ಅವರಿಗೆ ಪ್ರತಿಫಲ ಸೇರುತ್ತದೆ. ಡಾಕ್ಟರ್ ಮಕ್ಕಳು ಡಾಕ್ಟರೇ ಆಗಬೇಕು, ಲಾಯರ್ ಮಕ್ಕಳು ಲಾಯರೇ ಆಗಬೇಕು ಎಂದೇನಿಲ್ಲ. ಶ್ರದ್ಧೆಯಿಂದ ಓದಿದರೆ ಯಾರು ಬೇಕಾದರೂ ಇಂತಹ ಸಾಧನೆ ಮಾಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು