5:43 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ನಂಜನಗೂಡು: ಅಲಮೇಲ ಅಮ್ಮ, ವೆಂಕಟರಮಣ ಸ್ವಾಮಿ ದೇಗುಲ ವಾರ್ಷಿಕೋತ್ಸವ, ಶ್ರೀನಿವಾಸ ಕಲ್ಯಾಣೋತ್ಸವ

29/02/2024, 18:12

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹುಲ್ಲಹಳ್ಳಿ ಪಟ್ಟಣದ ಮಹದೇವ ತಾತ ಬಡಾವಣೆಯಲ್ಲಿರುವ ಶ್ರೀ ಅಲಮೇಲು ಮಂಗಮ್ಮ ಅಮ್ಮನವರ ಸಮೇತ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದ ಎರಡನೇ ವಾರ್ಷಿಕೋತ್ಸವ ಹಾಗೂ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.


ಎರಡನೇ ವಾರ್ಷಿಕೋತ್ಸವದ ಅಂಗವಾಗಿ ದೇವಾಲಯದಲ್ಲಿ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರೀದೇವಿ ಹಾಗೂ ಭೂದೇವಿ ಸಮೇತರಾಗಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಏರ್ಪಡಿಸಲಾಗಿತ್ತು. ಹುಲ್ಲಹಳ್ಳಿ ಸೇರಿದಂತೆ ತಾಲೂಕಿನ ವಿವಿಧಡೆಯಿಂದ ಸಾವಿರಾರು ಭಕ್ತರು ದೇವಾಲಯಕ್ಕೆ ಬಂದು ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಭಾವ ಮೆರೆದರು. ದೇವಾಲಯದ ಶ್ರೀ ವೆಂಕಟರಮಣ ಸ್ವಾಮಿ, ಶ್ರೀ ಅಲಮೇಲು ಮಂಗಮ್ಮ, ಗಣಪತಿ ಹಾಗೂ ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಬಂದ ಎಲ್ಲ ಭಕ್ತರಿಗೆ ದೇವಾಲಯದ ವತಿಯಿಂದ ಪ್ರಸಾದ ಹಾಗೂ ಲಾಡು ವಿತರಣೆ ಮಾಡಲಾಯಿತು.
ಇದೇ ಸಂದರ್ಭ ನಂಜನಗೂಡಿನ ಚಿನ್ಮಯಿ ಶ್ರೀವಾರಿ ಭಜನಾ ಮಂಡಳಿಯವರು ನಡೆಸಿಕೊಟ್ಟ ಭಜನೆ ಹಾಗೂ ಉಷಾ ವೇಣುಗೋಪಾಲ್ ರವರ ನೂಪುರ ನೃತ್ಯಾಂಜಲಿ ತಂಡದ ಮಕ್ಕಳು ನಡೆಸಿಕೊಟ್ಟ ಭರತನಾಟ್ಯದ ನೃತ್ಯ ರೂಪಕಗಳು ನೋಡುಗರ ಮನಸೂರೆಗೊಂಡವು.
ಬಳಿಕ ಭಜನಾ ಮಂಡಳಿ ಹಾಗೂ ನೃತ್ಯ ತಂಡದವರಿಗೆ ದೇವಾಲಯದ ನಿರ್ಮಾತೃಗಳಾದ ವಿಜಯಲಕ್ಷ್ಮಿನಾರಾಯಣ್ ರೆಡ್ಡಿ ಕುಟುಂಬದವರಿಂದ ಸನ್ಮಾನಿಸಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು