5:30 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಮಾರ್ಚ್ 25: ಮಂಗಳೂರಿನ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ ನೇತೃತ್ವದಲ್ಲಿ ‘ಶಿಲುಬೆಯ ಹಾದಿ’

12/03/2024, 16:12

ಮಂಗಳೂರು(reporterkarnataka.com): ನಗರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚು ನೇತೃತ್ವದಲ್ಲಿ ಮಾರ್ಚ್ 25ರಂದು ಸಂಜೆ 4.30 ಗಂಟೆಗೆ “ಶಿಲುಬೆಯ ಹಾದಿ” (ಕುರ್ಸಾಚಿ ವಾಟ್) ನ್ನು ಸಿಟಿ ವಲಯದ 12 ಚರ್ಚುಗಳ ಸಹಯೋಗದಿಂದ ನಡೆಸಲಾಗುತ್ತದೆ.

ಕೊರ್ಡೆಲ್, ವಾಮಂಜೂರ್, ಪಾಲ್ದಾನೆ, ಬೊಂದೇಲ್, ದೇರೆಬೈಲು, ನೀರುಮಾರ್ಗ, ಕೆಲರೈ, ಬಜ್ಜೊಡಿ, ಕಪಿತಾನಿಯೋ, ಬಜಾಲ್, ಪೆರ್ಮಾಯಿ, ಶಕ್ತಿನಗರ ಚರ್ಚುಗಳು ಭಾಗವಹಿಸಲಿದ್ದು, ಏಸುಕ್ರಿಸ್ತರು ಶಿಲುಬೆಯ 14 ಹಾದಿಗಳನ್ನು ಈ ಚರ್ಚುಗಳ ಕಲಾವಿದರ ನಟನೆಯ ಮೂಲಕ ಚರ್ಚಿನ ಆವರಣದ ಒಳಗೆ ನಡೆಸಲಾಗುವುದು. ಶಿಲುಬೆಯ ಹಾದಿಯ 14 ನಿಲ್ದಾಣಗಳನ್ನು (ಸ್ಟೇಶನ್) ನ್ನು ವಲಯದ 12 ಚರ್ಚುಗಳ ಹಾಗೂ ಧರ್ಮಗುರುಗಳ ಮತ್ತು ಧರ್ಮಭಗಿನಿಯರ ಪ್ರತಿನಿಧಿಗಳು ನಡೆಸಿಕೊಡುತ್ತಾರೆ. ಸಂಜೆ 4.30ಕ್ಕೆ ಬಲಿಪೂಜೆ, ನಂತರ ಶಿಲುಬೆಯ ಹಾದಿ, 12ನೇ ನಿಲ್ದಾಣದಲ್ಲಿ ಪ್ರವಚನವನ್ನು ನಡೆಸಿಲಾಗುವುದು.
ಈ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್ ಅವರು
ಸ್ಕ್ರಿಪ್ಟ್ ಬಿಡುಗಡೆ ಮಾಡಿದರು. ಸಹಾಯಕ ಧರ್ಮಗುರುಗಳಾದ ವಂ| ಪಾ| ಪಾವುಲ್ ಡಿ’ಸೋಜ, ಧರ್ಮಪ್ರಾಂತ್ಯದ ಪಿ.ಆರ್.ಓ. ರೋಯ್ ಕ್ಯಾಸ್ಟಲಿನೋ, ಚರ್ಚಿನ ಉಪಾಧ್ಯಕ್ಷ ರೂತ್ ಕ್ಯಾಸ್ಟಲಿನೋ, ಕಾರ್ಯದರ್ಶಿ ಅನಿಲ್ ಡೆಸಾ, ಸರ್ವ ಆಯೋಗದ ಸಂಚಾಲಕ ಡೊಲ್ಫಿ ಡಿ’ಸೋಜ, 12 ಚರ್ಚುಗಳ ಉಪಾಧ್ಯಕ್ಷರು ಉಪಸ್ಥಿತರಿದ್ದರು. ಕಲಾವಿದರಿಗೆ ನಿರ್ದೇಶಕರಾಗಿ ಡೆನ್ನಿಸ್ ಮೊಂತೆರೋ ಹಾಗೂ ಸ್ಟಾö್ಯನಿ ಅಲ್ವಾರೀಸ್, ಏಸು ಕ್ರಿಸ್ತರ ಪಾತ್ರ ವನ್ನು ವಿಕಾಸ್ ಕುಲಾಕುಲ್, ಮದರ್ ಮೇರಿಯ ಪಾತ್ರವನ್ನು ಆ್ಯಶೆಲ್ ಡಿ’ಸಿಲ್ವಾ, ಪಿಲಾತನ ಪಾತ್ರವನ್ನು ಆಲ್ವಿನ್ ಪಾಯಸ್ ಮುಂತಾದವರು ನಿರ್ವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು