5:55 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ನಂಜನಗೂಡು: ಹಳ್ಳಿ ಸೊಗಡಿನ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ; ಕಲಾ ರಸಿಕರು ಫುಲ್ ಖುಷಿ

16/03/2024, 19:23

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ನೆಲತಾಳಪುರ ಗ್ರಾಮದಲ್ಲಿ ಶ್ರೀ ಚಿಕ್ಕದೇವಮ್ಮನವರ ಹಬ್ಬದ ಪ್ರಯುಕ್ತ ಕುರುಕ್ಷೇತ್ರ ಅಥವಾ ಧರ್ಮರಾಜ ಸ್ಥಾಪನೆ ಎಂಬ ಪೌರಾಣಿಕ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.


ಗ್ರಾಮದ ಧರೆಗೆ ದೊಡ್ಡವರು ಮತ್ತು ಶ್ರೀ ಚಿಕ್ಕದೇವಮ್ಮನವರ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಹೆಸರಾಂತ ಉಮೇಶ್ ಡ್ರಾಮಾ ಸೀನರಿ ಹಾಗೂ ವಿದ್ಯುತ್ ದೀಪಗಳಿಂದ ಅಲಂಕೃತವಾದ ಭವ್ಯ ರಂಗ ಮಂಟಪದಲ್ಲಿ ನಾಟಕ ಪ್ರದರ್ಶನ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಚಿಕ್ಕರಂಗನಾಯಕ ಹಾಗೂ ಮತ್ತಿತರರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಬಳಿಕ ಅವರು ಮಾತನಾಡಿ ಇಂದಿನ ಆಧುನಿಕತೆ ಸಿನಿಮಾ ರಂಗದ ನಡುವೆಯೂ ನಾಟಕ ರಂಗಭೂಮಿ ಉಳಿದಿರುವುದು ಹಳ್ಳಿಗಾಡಿನಲ್ಲಿ ಮಾತ್ರ. ಸಿನಿಮಾ ರಂಗದ ದಿಗ್ಗಜ ಡಾ. ರಾಜಕುಮಾರ್ ಕೂಡ ರಂಗಭೂಮಿಯಿಂದಲೇ ಬಂದವರು ಎಂದು ನಾಟಕ ರಂಗಭೂಮಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ನಾಟಕದಲ್ಲಿ ಒಳ್ಳೆಯ ಹಾಗೂ ಕೆಟ್ಟ ಸನ್ನಿವೇಶಗಳು ಮತ್ತು ಪಾತ್ರಗಳು ಬರುತ್ತವೆ. ಪ್ರೇಕ್ಷಕರಾದ ತಾವು ಕೆಟ್ಟದ್ದನ್ನು ಬದಿಗೊತ್ತಿ ಒಳ್ಳೆಯದನ್ನು ಮಾತ್ರ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಇದೇ ಸಂದರ್ಭ ವೇದಿಕೆ ಮೇಲಿನ ಗಣ್ಯರನ್ನು ನಾಟಕ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ನಂತರ ನಡೆದ ನಾಟಕ ಪ್ರದರ್ಶನದಲ್ಲಿ ಶ್ರೀ ಕೃಷ್ಣ, ಅರ್ಜುನ ಹಾಗೂ ಅಭಿಮನ್ಯು ಪಾತ್ರಧಾರಿಗಳು ಉತ್ತಮ ನಟನೆ ಮಾಡುವ ಮೂಲಕ ಪ್ರೇಕ್ಷಕರ ಮನಸೂರೆಗೊಂಡರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆಂಪಮ್ಮ ತೋಪನಾಯ್ಕ, ಸದಸ್ಯರಾದ ಶಶಿಕಲಾಪ್ರಭುಸ್ವಾಮಿ, ರಾಜೇಂದ್ರ, ನಂಜನಗೂಡು ನಗರ ಘಟಕದ ಬಿಜೆಪಿ ಅಧ್ಯಕ್ಷ ಹರ್ಷಿತ್ ಕುಮಾರ್, ಮುಖಂಡರುಗಳಾದ ರಾಮಶೆಟ್ಟಿ, ನಾಗೇಶ್, ಮಹೇಶ್ ಸೇರಿದಂತೆ ಗ್ರಾಮದ ಯಜಮಾನ್ರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು