3:14 PM Saturday27 - April 2024
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ

ಇತ್ತೀಚಿನ ಸುದ್ದಿ

ಸೈಬರ್ ಅಪರಾಧ: ರಾಜಸ್ಥಾನದಲ್ಲಿ ಮಂಗಳೂರು ಪೊಲೀಸರ ಕಾರ್ಯಾಚರಣೆ; 1.15 ಲಕ್ಷ ರೂ. ವಂಚಿಸಿದ ಆರೋಪಿಯ ಬಂಧನ

24/03/2024, 23:14

ಮಂಗಳೂರು(reporterkarnataka.com): ವಾಟ್ಸ್ ಆಫ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇದೆ ಎಂದು ನಂಬಿಸಿ 1.15 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಸಿ.ಈ.ಎನ್. ಕ್ರೈಂ ಪೊಲೀಸರು ರಾಜಸ್ಥಾನ ನಿವಾಸಿಯೊಬ್ಬನನ್ನು ಬಂಧಿಸಿದ್ದಾರೆ.
ರಾಜಸ್ಥಾನದ ಜೋಧ್ ಪುರ್ ಜಿಲ್ಲೆಯ ಬಾವುರಿ ಗ್ರಾಮದ ನಿವಾಸಿಯಾದ ಸದ್ದಾಂ ಗೌರಿ ಅಲಿಯಾಸ್ ಬಾವುರಿ (30) ಎಂಬಾತನನ್ನು ಬಾವುರಿ ಗ್ರಾಮದಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರ ಸಿ.ಈ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಕುರಿತು 131/2023 ಕಲಂ 66(ಸಿ) 66(ಡಿ) ಐಟಿ ಆಕ್ಟ್ 420 ಐಪಿಸಿಯಡಿ ಪ್ರಕರಣ ದಾಖಲಾಗಿತ್ತು.
ಆರೋಪಿಯು ವಾಟ್ಸ್ ಆಫ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇರುವುದಾಗಿ ಪಿರ್ಯಾದಿದಾರಿಗೆ ಸಂದೇಶ ಕಳುಹಿಸಿ ಪಾರ್ಟ ಟೈಂ ಜಾಬ್ ಹೆಸರಿನಲ್ಲಿ ಲಿಂಕ್ ಕಳುಹಿಸಿ ಈ ಲಿಂಕ್ ಮುಖಾಂತರ ಹಣ ತೊಡಗಿಸಿ, ಟಾಸ್ಕ್ ಕಂಪ್ಲೀಟ್ ಮಾಡುವ ಮುಖಾಂತರ ಹಣ ಮಾಡಬಹುದು ಎಂಬುದಾಗಿ ಪಿರ್ಯಾದಿದಾರರನ್ನು ನಂಬಿಸಿ ಪಿರ್ಯಾದಿದಾರರಿಂದ ಒಟ್ಟು 1,15,000 ಹಣ ಪಡೆದು ವಂಚಿಸಿದ್ದ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ ವಿವೋ ಕಂಪನಿಯ ಎರಡು ಮೊಬೈಲ್ ಫೋನ್ , 8 ಡೆಬಿಟ್ ಕಾರ್ಡ್, 4 ಬ್ಯಾಂಕ್ ಚೆಕ್ ಬುಕ್ ಗಳು, ಆಧಾರ್ ಕಾರ್ಡ್, ಪಾನ್ ಕಾರ್ಡ್ ಇತ್ಯಾದಿ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಹಾಗೂ ಡಿಸಿಪಿ ಸಿದ್ದಾರ್ಥ ಗೊಯಲ್ ಅವರ ಮಾರ್ಗದರ್ಶನದಂತೆ, ಸಿಸಿಆರ್ ಬಿ ಘಟಕದ ಎಸಿಪಿ ರವೀಶ್ ನಾಯಕ್ ಅವರ ನೇತೃತ್ವದಲ್ಲಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ಯಾಮಸುಂದರ್ ಮತ್ತು ಸಿಬ್ಬಂದಿಯವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು