7:11 PM Wednesday1 - May 2024
ಬ್ರೇಕಿಂಗ್ ನ್ಯೂಸ್
ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ…

ಇತ್ತೀಚಿನ ಸುದ್ದಿ

ಮಂಗಳೂರು ಕೆನರಾ ಕಾಲೇಜಿನಲ್ಲಿ ಸ್ವಚ್ಛತಾ ಶಿಬಿರ ಮತ್ತು ಮತದಾರರ ಜಾಗೃತಿ ಅಭಿಯಾನ

02/04/2024, 13:07

ಮಂಗಳೂರು(reporterkarnataka.com): ಭಾರತ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯದ ನಿರ್ದೇಶನಗಳನ್ನು ಅನುಸರಿಸಿ, ಕೆನರಾ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳು, ಮಂಗಳೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಮತ್ತು ಬೆಂಗಳೂರಿನ ಎನ್‌ಎಸ್‌ಎಸ್‌ನ ಪ್ರಾದೇಶಿಕ ನಿರ್ದೇಶನಾಲಯದ ಸಹಯೋಗದೊಂದಿಗೆ ಶಹೀದಿ ದಿವಸ್ ಸಂದರ್ಭದಲ್ಲಿ ಒಂದು ದಿನದ ಕಾಲೇಜು ಮಟ್ಟದ ‘ ಸ್ವಚ್ಛತಾ ಶಿಬಿರ ಮತ್ತು ಮತದಾರರ ಜಾಗೃತಿ ಅಭಿಯಾನ ‘ಜರುಗಿತು.



ಬೆಂಗಳೂರಿನ ಎನ್‌ಎಸ್‌ಎಸ್‌ನ ಪ್ರಾದೇಶಿಕ ನಿರ್ದೇಶಕ ಡಿ. ಕಾರ್ತಿಗೇಯನ್ ಮುಖ್ಯ ಅತಿಥಿಯಾಗಿದ್ದರು. ಎನ್‌ಎಸ್‌ಎಸ್ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದ ಕಾರ್ತಿಗೇಯನ್ ಮತದಾರರು ತಮ್ಮ ಮತದಾನದ ಹಕ್ಕನ್ನು ಆತ್ಮಸಾಕ್ಷಿಯಾಗಿ ಚಲಾಯಿಸುವಂತೆ ತಿಳಿಸಿದರು.
ರಾಷ್ಟ್ರ ನಿರ್ಮಾಣಕ್ಕೆ ಅವರ ಸಕಾರಾತ್ಮಕ ಕೊಡುಗೆಯ ಮಹತ್ವವನ್ನು ಒತ್ತಿ ಹೇಳಿದರು. ಇದಲ್ಲದೆ, ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಎನ್‌ಎಸ್‌ಎಸ್ ಘಟಕಗಳು ಪ್ರದರ್ಶಿಸಿದ ಅಚಲವಾದ ಸಮರ್ಪಣೆ ಮತ್ತು ಬದ್ಧತೆಯನ್ನು ಅವರು ಶ್ಲಾಘಿಸಿದರು.
ಮಂಗಳೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ. ಮಾತನಾಡಿ, ಯುವಜನರಲ್ಲಿ ಸೇವಾ ಮನೋಭಾವ ಮತ್ತು ದೇಶ ಭಕ್ತಿಯನ್ನು ಬಡಿದೆಬ್ಬಿಸುವ ಕೆಲಸ ಎನ್ ಎಸ್ ಎಸ್ ಮೂಲಕ ನಿರಂತರವಾಗಿರಬೇಕು ಎಂದರು.

ಮಂಗಳೂರು ಎಸ್‌ಡಿಎಂ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ.ಪುಷ್ಪರಾಜ್ ಕೆ. ಅವರು ಮುಖ್ಯ ಭಾಷಣಕಾರರಾಗಿ “ಮೇರಾ ಪೆಹಲಾ ವೋಟ್ ದೇಶ್ ಕೆ ಲಿಯೇ” ವಿಷಯದ ಕುರಿತು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮಲತಾ ವಿ. ಅಧ್ಯಕ್ಷತೆ ವಹಿಸಿದ್ದರು.


ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಸೀಮಾ ಪ್ರಭು ಎಸ್. ಅವರು ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಮತದಾರರ ಜಾಗೃತಿ ಪ್ರತಿಜ್ಞೆಗೆ ಸಹಿ ಹಾಕಲಾಯಿತು. ಇನ್ನೋರ್ವ ಕಾರ್ಯಕ್ರಮಾಧಿಕಾರಿ ಎಂ.ಕೀರ್ತನಾ ಭಟ್ ಸ್ವಾಗತಿಸಿ, ಸಾತ್ವಿಕ್ ಆಚಾರ್ಯ ವಂದಿಸಿದರು. ಲಿಖಿತ್ ಅವರು ಸಂಯೋಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು