9:40 AM Friday3 - May 2024
ಬ್ರೇಕಿಂಗ್ ನ್ಯೂಸ್
ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಹಾಡಹಗಲ್ಲೇ ಕಾಡಾನೆ ಸಂಚಾರ: ಸ್ವಲ್ಪದರಲ್ಲೇ ಬೈಕ್ ಸವಾರ ಪಾರು; ನೀರಿಗಾಗಿ ಪರದಾಟ ಶಂಕೆ

08/04/2024, 21:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪಕರ್ಕಿಸುವ ಚಾರ್ಮಾಡಿ ಘಾಟಿಯ 9ನೇ ತಿರುವಿನ ಸಮೀಪ ಒಂಟಿ ಸಲಗ ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಕಂಡುಬಂದಿದೆ.
ಸೋಮವಾರ ನೆರಿಯದ ಬಾಂಜಾರು ಮಲೆ ಕಡೆಯಿಂದ ಆಗಮಿಸಿದ ಕಾಡಾನೆ ಕೆಲವು ಹೊತ್ತು ರಸ್ತೆ ಬದಿಯಲ್ಲಿ ನಿಂತುಕೊಂಡು ಬಳಿಕ ಅಲ್ಲಿಂದ ತೆರಳಿ ರಸ್ತೆಯಲ್ಲಿ ಒಂದಿಷ್ಟು ಹೊತ್ತು ಸಂಚರಿಸಿ ಮತ್ತೆ ನೆರಿಯ ಕಾಡಿನ ಕಡೆಗೆ ತೆರಳಿದೆ.
-ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರ-
ರಸ್ತೆ ಬದಿ ಆನೆಯನ್ನು ಗಮನಿಸಿದ ವಾಹನ ಸವಾರರು ಆನೆ ದಾಟಿ ಹೋಗಲು ಅನುಕೂಲವಾಗುವಂತೆ ಇಕ್ಕೆಲಗಳಲ್ಲೂ ವಾಹನಗಳನ್ನು ನಿಲ್ಲಿಸಿದ್ದರು. ಆದರೆ ರಸ್ತೆಯ ಒಂದು ಬದಿಯಲ್ಲಿ ವಾಹನಗಳಿಲ್ಲದ ಕಾರಣ ಆನೆ ಇರುವುದನ್ನು ತಿಳಿಯದ ಬೈಕ್ ಸವಾರರೊಬ್ಬ ಆನೆ ದಾಟುತ್ತಿರುವ ಸಮಯದಲ್ಲೇ ಸಂಚರಿಸಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾನೆ. ಉಳಿದ ವಾಹನ ಸವಾರರು ಆನೆ ಇರುವುದರ ಬಗ್ಗೆ ಆತನ ಗಮನಕ್ಕೆ ತಂದರು ಅದನ್ನು ತಿಳಿಯದ ಆತ ಸಂಚಾರ ನಡೆಸಿದ್ದಾನೆ. ಈ ದೃಶ್ಯವನ್ನು ಪ್ರಯಾಣಿಕರು ವಿಡಿಯೋ ಚಿತ್ರೀಕರಣ ಮಾಡಿದ್ದು,ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಶನಿವಾರ ರಾತ್ರಿ ಕಾಡಾನೆ ಬೆಳ್ತಂಗಡಿ ತಾಲ್ಲೂಕಿನ ಕಲ್ಮಂಜದ ತೋಟವೊಂದರಲ್ಲಿ ದಾಂಧಲೆ ನಡೆಸಿದ್ದು ಬಳಿಕ ಭಾನುವಾರ ರಾತ್ರಿ ಚಾರ್ಮಾಡಿ ಬಳಿ ಕಂಡುಬಂದಿದ್ದು ಸ್ಥಳೀಯರು ಹಾಗೂ ಇಲಾಖೆಯವರು ಸೇರಿ ಆನೆಯನ್ನು ಕಾಡಿಗಟ್ಟಿದ್ದರು. ಈ ಸಮಯ ಅದು ನೆರಿಯ ಕಾಡಿನೊಳಗೆ ಓಡಿತ್ತು. ಅದರ ಬಳಿಕ ಸೋಮವಾರ ನೆರಿಯದ ಬಾಂಜಾರು ಮಲೆ ಮೂಲಕ ಚಾರ್ಮಾಡಿ ಘಾಟಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ. ಕಲ್ಮಂಜದಲ್ಲಿ ದಾಂಧಲೆ ನಡೆಸಿದ ಆನೆ ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯಕ್ಷವಾಗಿರುವ ಅನುಮಾನಗಳು ಮೂಡಿವೆ.
ಪ್ರಸ್ತುತ ಕಾಡಿನ ಕೆರೆಗಳು, ನೇತ್ರಾವತಿ ನದಿ ಸಂಪೂರ್ಣ ಒಣಗಿದ್ದು ಕೇವಲ ಮೃತ್ಯುಂಜಯ ನದಿಯಲ್ಲಿ ಮಾತ್ರ ನೀರು ಹರಿಯುತ್ತಿದ್ದು, ಈ ನದಿ ಹರಿಯುವ ನೆರಿಯ, ಚಾರ್ಮಾಡಿ ಈ ಭಾಗದಲ್ಲಿ ಕಾಡಾನೆ ಆಶ್ರಯ ಪಡೆದಿರುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು