1:23 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಒಂದೇ ವೇದಿಕೆಯಲ್ಲಿದ್ದರೂ ಪರಸ್ಪರ ಮುಖ ನೋಡದ ಈಶ್ವರಪ್ಪ- ರಾಘವೇಂದ್ರ: ಆರೆಸ್ಸೆಸ್ ಯುಗಾದಿ ಸಮಾರಂಭದಲ್ಲಿ ಮುನಿಸಿಕೊಂಡೇ ಇದ್ದ ನಾಯಕರು!

09/04/2024, 21:03

ಜಯಶ್ರೀ ಪಾಟೀಲ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹಾಗೂ ಬಿಜೆಪಿ ರೆಬೆಲ್ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರು ಒಂದೇ ವೇದಿಕೆಯಲ್ಲಿದ್ದರೂ ಕೈಕುಲುವುದು ಬಿಡಿ, ಪರಸ್ಪರ ಮುಖ ನೋಡದ ಘಟನೆ ನಡೆದಿದೆ.
ಆರೆಸ್ಸೆಸ್ ಆಯೋಜಿಸಿದ ಯುಗಾದಿ ಕಾರ್ಯಕ್ರಮದಲ್ಲಿ ಈ ಇಬ್ಬರು ನಾಯಕರು ಒಂದೇ ವೇದಿಕೆಯಲ್ಲಿದ್ದರು. ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ರಾಘವೇಂದ್ರ ಹಾಗೂ ಮಾಜಿ ಸಚಿವ ಈಶ್ವರಪ್ಪ ಅವರು ಆರೆಸ್ಸೆಸ್ ಕಪ್ಪು ಟೋಪಿ ಧರಿಸಿ ಭಾಗವಹಿಸಿದ್ದರು. ಇಬ್ಬರು ನಾಯಕರು ಆರೆಸ್ಸೆಸ್ ಸಮವಸ್ತ್ರವಾದ ಬಿಳಿ ಶರ್ಟ್/ ಜುಬ್ಬಾ ತೊಟ್ಟಿದ್ದರು. ದಶಕಗಳ ಕಾಲ ಒಂದೇ ಪಕ್ಷದಲ್ಲಿ ದುಡಿದಿದ್ದ ಆ ಇಬ್ಬರು ನಾಯಕರಲ್ಲಿ ಒಬ್ಬರು ಹಿರಿಯ ರಾಜಕಾರಣಿಯಾದರೆ, ಇನ್ನೊಬ್ಬರು ಯುವ ನೇತಾರ. ಆದರೆ ಈ ಇಬ್ಬರೂ ನಾಯಕರುಗಳು ಒಬ್ಬರ ಮುಖ ಇನ್ನೊಬ್ಬರು ನೋಡುವ ಗೋಜಿಗೆ ಹೋಗಿಲ್ಲ. ಯಾಕೆಂದರೆ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಈ ಇಬ್ಬರು ನಾಯಕರು ಸ್ಪರ್ಧಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರನಾದ ರಾಘವೇಂದ್ರ ಅವರು ಬಿಜೆಪಿಯ ಅಧಿಕೃತ ಅಭ್ಯರ್ಥಿಯಾದರೆ, ಈಶ್ವರಪ್ಪ ಅವರು ಬಿಜೆಪಿ ಬಂಡಾಯ ಅಭ್ಯರ್ಥಿ.

ಇತ್ತೀಚಿನ ಸುದ್ದಿ

ಜಾಹೀರಾತು