7:26 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ: ಮಾಜಿ ಶಾಸಕರಿಂದ ಮತದಾರರ ಭೇಟಿ

11/04/2024, 18:02

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.ಕಂ

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಚಾಮರಾಜನಗರ
ಕ್ಷೇತ್ರ ವ್ಯಾಪ್ತಿಯ ನಂಜನಗೂಡಿನಲ್ಲಿ ಇಂದು ಬಿಜೆಪಿ ಬಿರುಸಿನ ಮತ ಪ್ರಚಾರ ನಡೆಸಿತು.


ಮಾಜಿ ಶಾಸಕ ಹರ್ಷವರ್ಧನ್ ನೇತೃತ್ವದಲ್ಲಿ ನಂಜನಗೂಡು ಪಟ್ಟಣದಲ್ಲಿ ಮತ ಪ್ರಚಾರ ನಡೆಸಲಾಯಿತು. ನಂಜನಗೂಡಿನ ಶ್ರೀ ರಾಘವೇಂದ್ರ ಸ್ವಾಮಿ ಅವರ ಮೂಲ ಮಠಕ್ಕೆ ತೆರಳಿ ಪೂಜೆ ಸಲ್ಲಿಸಿ ಬಿಜೆಪಿ ಗೆಲ್ಲಿಸುವಂತೆ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಬಿಜೆಪಿ ಮುಖಂಡರು ಸಂಕಲ್ಪ ಮಾಡಿಕೊಂಡರು.
ಬಳಿಕ ಸ್ಥಳೀಯ ಬಿಜೆಪಿ ಮುಖಂಡರ ಜೊತೆ ಮತ ಪ್ರಚಾರ ನಡೆಸಿದರು. ಅಲ್ಲಿಂದ ದೇವಾಲಯದ ಸುತ್ತಮುತ್ತಲ ಪ್ರಮುಖರ ಮನೆಗಳು ಹಾಗೂ ಬೀದಿ, ಬೀದಿಗಳಿಗೆ ತೆರಳಿ ಮತದಾರರನ್ನುಭೇಟಿ ಮಾಡಲಾಯಿತು.
ಬಳಿಕ ಮಾತನಾಡಿ ಹರ್ಷವರ್ಧನ ಅವರು ಇಂದು ನಂಜನಗೂಡಿನ ಶ್ರೀ ರಾಘವೇಂದ್ರ ಸ್ವಾಮಿ ಅವರ ಮಠಕ್ಕೆ ತೆರಳಿ ಪೂಜೆ ಸಲ್ಲಿಸಿ ಪಟ್ಟಣದಾದ್ಯಂತ ಮತಪ್ರಚಾರ ನಡೆಸುತ್ತಿದ್ದೇವೆ. ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿಗೆ ಉತ್ತಮ ವಾತಾವರಣವಿದ್ದು ಗೆಲುವು ಸಾಧಿಸಲಿದೆ. ನಮ್ಮ ಪಕ್ಷದಿಂದ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ ಅಲ್ಲದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯ ಕಾರ್ಯಕ್ರಮಗಳಿಂದಾಗಿ ಈ ಬಾರಿಯೂ ಬಿಜೆಪಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.
ರಾಜ್ಯ ಖಾದಿ ಗ್ರಾಮೋದ್ಯೋಗ ನಿಗಮ ಮಂಡಳಿಯ ರಾಜ್ಯಾಧ್ಯಕ್ಷ ಕೃಷ್ಣಪ್ಪ ಗೌಡ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಚಿಕ್ಕರಂಗ ನಾಯಕ, ನಗರ ಘಟಕದ ಅಧ್ಯಕ್ಷ ಸಿದ್ದರಾಜು, ನಗರಸಭಾ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ನಗರಸಭಾ ಸದಸ್ಯ ಕಪಿಲೇಶ್, ಮಾದೇವ ಪ್ರಸಾದ್, ಮುಖಂಡರುಗಳಾದ ಬಾಲಚಂದ್ರು,ಗುರು, ಮಧು,ಅನಂತ, ನಂದಿನಿ, ಗಾಯತ್ರಿ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು