9:53 AM Friday3 - May 2024
ಬ್ರೇಕಿಂಗ್ ನ್ಯೂಸ್
ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಇತ್ತೀಚಿನ ಸುದ್ದಿ

ಫುಲ್ ಗಾಸ್ಪೆಲ್ ಪಾಸ್ಟರ್ಸ್ ಫೆಲೋಶಿಪ್’ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆಲುವಿಗಾಗಿ ವಿಶೇಷ ಪ್ರಾರ್ಥನೆ

11/04/2024, 16:12

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸಾಮರಸ್ಯದ ಜೀವನವನ್ನು ಎದುರು ನೋಡುತ್ತಿದೆ. ಇದರಿಂದ ನಮ್ಮ ಜಿಲ್ಲೆಯಲ್ಲೇ ಉದ್ಯೋಗ ಸೃಷ್ಟಿ ಸಾಧ್ಯ ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಬಲ್ಮಠದ ದಕ್ಷಿಣ ಕನ್ನಡ ಫುಲ್ ಗಾಸ್ಪೆಲ್ ಪಾಸ್ಟರ್ಸ್ ಫೆಲೋಶಿಪ್ ನಲ್ಲಿ ಅವರು ಮಾತನಾಡಿದರು.


ದಕ್ಷಿಣ ಕನ್ನಡದಲ್ಲಿ ಪ್ರೀತಿ ಹಂಚುವ ಕಾಯಕ ಕಡಿಮೆಯಾಗಿದೆ. ದ್ವೇಷಮಯ ವಾತಾವರಣವನ್ನು ಸೃಷ್ಟಿಸಲಾಗಿದೆ. ಇದರಿಂದ ಜಿಲ್ಲೆಗೆ ಕೋಮುವಾದಿ ಹಣೆಪಟ್ಟಿ ಬಂದಿದೆ. ಇದನ್ನು ತೊಡೆದು ಹಾಕದೇ, ಉದ್ಯೋಗ ಸೃಷ್ಟಿ ಅಸಾಧ್ಯ. ಆದರೆ ಇಲ್ಲೇ ಉದ್ಯೋಗ ಸೃಷ್ಟಿಯಾಗಬೇಕು ಎನ್ನುವುದು ಎಷ್ಟೋ ಹೆತ್ತವರ, ಪೋಷಕರ ಕನಸು. ನಮ್ಮ ಮನೆಯ ಮಕ್ಕಳು ಉದ್ಯೋಗವನ್ನರಸಿ, ಬೇರೆ ಊರುಗಳಿಗೆ ಹೋಗುವಂತಾಗಬಾರದು. ತಮ್ಮ ತಂದೆ – ತಾಯಿಯ ಜೊತೆ ನಮ್ಮ ಊರಿನಲ್ಲೇ ಉಳಿಯಬೇಕು ಎಂದರು.
ಇದೇ ಸಂದರ್ಭ ಪದ್ಮರಾಜ್ ಆರ್. ಪೂಜಾರಿ ಅವರ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಸಂಸ್ಥೆಯ ಮುಖ್ಯಸ್ಥ ಐವನ್ ಮೊಂತೆರೋ ಪ್ರಾರ್ಥಿಸಿದರು.
ಸಂಸ್ಥೆಯ ಅಧ್ಯಕ್ಷ ಡೊನಾಲ್ಡ್ ಪಿ. ಮಿನೇಜಸ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಗಿರೀಶ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು