8:05 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಬಿರುಬಿಸಿಲಿನಲ್ಲೂ ಕುಗ್ಗದ ಉತ್ಸಾಹ: ಬಜಪೆಯಲ್ಲಿ ಕಾಂಗ್ರೆಸ್ ರೋಡ್ ಶೋ; ಅಭಿವೃದ್ಧಿ ಕಾರ್ಯದ ಭರವಸೆ ನೀಡಿದ ಪದ್ಮರಾಜ್ ಆರ್. ಪೂಜಾರಿ

12/04/2024, 15:13

ಬಜಪೆ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೂತ್ ಅಧ್ಯಕ್ಷರ, ಕಾರ್ಯಕರ್ತರ ರೋಡ್ ಶೋ ಹಾಗೂ ಪ್ರಚಾರ ಸಭೆ ಶುಕ್ರವಾರ ಬಜಪೆಯಲ್ಲಿ ನಡೆಯಿತು.
ಬಿರುಬಿಸಿಲನ್ನು ಲೆಕ್ಕಿಸದೇ ಅಭ್ಯರ್ಥಿ, ಮುಖಂಡರು, ಕಾರ್ಯಕರ್ತರು ಹೆಜ್ಜೆ ಹಾಕಿದರು. ರೋಡ್ ಶೋ ನಡುವೆ ಬಜ್ಪೆಯ ಅಂಗಡಿ – ಮಳಿಗೆಗಳಿಗೆ ತೆರಳಿ ಮತ ಯಾಚನೆ ನಡೆಯಿತು.
ರೋಡ್ ಶೋಗೆ ಮೊದಲು ಬಜ್ಪೆ ಚರ್ಚ್ ಹಾಲಿನಲ್ಲಿ 62ನೇ ತೋಕೂರು ಜಿಲ್ಲಾ ಪಂಚಾಯತ್ ಕ್ಷೇತ್ರ ಹಾಗೂ ಬಜ್ಪೆ ಪಟ್ಟಣ ಪಂಚಾಯತ್ ಕ್ಷೇತ್ರದ ಬೂತ್ ಅಧ್ಯಕ್ಷರು ಹಾಗೂ ಸಕ್ರೀಯ ಕಾರ್ಯಕರ್ತರ ಸಮಾವೇಶ ನಡೆಯಿತು.
ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಜಿಲ್ಲೆಯ ಬೇರೆ ಬೇರೆ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡುವಾಗ ಕಾಂಗ್ರೆಸ್ ಗೆಲ್ಲುವುದು ಖಾತ್ರಿಯಾಗಿದೆ. ಜನರು ಬದಲಾವಣೆ ಬಯಸಿದ್ದಾರೆ. ಸಾಮರಸ್ಯದ ಅಭಿವೃದ್ಧಿಯನ್ನು ಎದುರು ನೋಡುತ್ತಿದ್ದಾರೆ. ಜನರ ನಿರೀಕ್ಷೆ ಸುಳ್ಳಾಗದಂತೆ, ಕಾರ್ಯಕರ್ತರ ಶ್ರಮ ವ್ಯರ್ಥವಾಗದಂತೆ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ನಾರಾಯಣಗುರುಗಳ ಪ್ರೇರಣೆ ಎಂಬಂತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಸುಯೋಗ ಒದಗಿ ಬಂದಿತು. ಲಾಕ್ ಡೌನ್ ಸಂದರ್ಭ ಆಹಾರ್ ಕಿಟ್ ಪೂರೈಕೆ, ಹಲವರಿಗೆ ಮನೆ ಕಟ್ಟಿ ನೀಡಿರುವ ಮೊದಲಾದ ಕೆಲಸ ಮಾಡಿಕೊಂಡು ಬಂದೆ. ಆದರೆ ರಾಜಕೀಯಕ್ಕೆ ಬರುತ್ತೇನೆ ಎಂಬ ಕಾರಣಕ್ಕೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿಲ್ಲ. ತಾನು ಚಿಕ್ಕಂದಿನಿಂದ ಅನುಭವಿಸಿಕೊಂಡು ಬಂದ ಬಡತನದ ನೋವು ನನ್ನಲ್ಲಿ ಇದ್ದರಿಂದ ಬಡವರ, ನೊಂದವರ ನೋವಿಗೆ ಸ್ಪಂದಿಸುವ ಗುಣ ಬೆಳೆಯಿತು. ಈಗ ರಾಜಕೀಯಕ್ಕೆ ಬಂದರೂ, ಸಮಾಜ ಸೇವೆ ನಿತ್ಯ ನಿರಂತರ ಕಾಯಕ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ, ನಮ್ಮ ಅಧಿಕೃತ ಅಭ್ಯರ್ಥಿ ಪದ್ಮರಾಜ್. ಆದರೆ ನಾವೆಲ್ಲರೂ ಅಭ್ಯರ್ಥಿಗಳೇ ಎನ್ನುವುದನ್ನು ಮರೆಯದಿರಿ. ಅತ್ಯಂತ ಹೆಚ್ಚಿನ ಲೀಡ್ ನೊಂದಿಗೆ ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಬಿಲ್ಲವ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಮೂಲ್ಕಿ ಬ್ಲಾಕ್ ಅಧ್ಯಕ್ಷ ಮೋಹನ್ ಕೋಟ್ಯಾನ್, ವಸಂತ್ ಪೆರ್ನಾಡ್, ಬಿ.ಜೆ. ರಹೀಂ, ಗುರುರಾಜ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು