ಇತ್ತೀಚಿನ ಸುದ್ದಿ
ಮಂಗಳೂರಿನಲ್ಲಿ ಪ್ರಧಾನಿ ರೋಡ್ ಶೋಗೆ ಕ್ಷಣಗಣನೆ ಆರಂಭ: ಮೈಸೂರಿನಲ್ಲಿ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರ ಜತೆ ವೇದಿಕೆ ಹಂಚಲಿರುವ ಮೋದಿ
14/04/2024, 11:13
ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಡಲನಗರಿ ಮಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮಂಗಳೂರಿನಲ್ಲಿ ಸುಮಾರು 2 ಕಿಮೀ. ರೋಡ್ ಶೋ ನಡೆಸಲಿದ್ದು, ಕ್ಷಣಗಣನೆ ಆರಂಭವಾಗಿದೆ.
ಪ್ರಧಾನಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ 4 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಜತೆ ಪ್ರಥಮ ಬಾರಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಂತಾದವರು ಉಪಸ್ಥಿತರಿರುವರು.
ಮಂಗಳೂರಿನಲ್ಲಿ ರಾತ್ರಿ 7.45ಕ್ಕೆ ರೋಡ್ ಶೋ ಆರಂಭವಾಗಲಿದೆ. ಬಜಪೆ ವಿಮಾನ ನಿಲ್ದಾಣದಿಂದ ಮೋದಿ ಅವರು ನೇರವಾಗಿ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತಕ್ಕೆ ಆಗಮಿಸುವರು. ಅಲ್ಲಿಂದ ರೋಡ್ ಶೋ ಆರಂಭವಾಗಲಿದೆ.