ಇತ್ತೀಚಿನ ಸುದ್ದಿ
ಲೋಕಸಭೆ ಚುನಾವಣೆ: ಏಪ್ರಿಲ್ 25, 26ರಂದು ರೂಮ್ ನೀಡದಂತೆ ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ
17/04/2024, 17:46
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಏಪ್ರಿಲ್ 26ರಂದು ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಏಪ್ರಿಲ್ 25, 26 ರಂದು ರೂಮ್ ನೀಡದಂತೆ ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಮತದಾನ ಪ್ರಕ್ರಿಯೆಯಿಂದ ಮತದಾರ ಹೊರಗುಳಿಯಬಾರದೆಂಬ ಉದ್ದೇಶದಿಂದ ಜಿಲ್ಲಾಡಳಿತ ಈ ಸೂಚನೆ ನೀಡಿದೆ.
ಅತಿ ಹೆಚ್ಚು ಪ್ರವಾಸಿಗರು ಜಿಲ್ಲೆಗೆ ಬರ್ತಿರೋದ್ರಿಂದ ಮನವಿ ಮಾಡಲಾಗಿದೆ. ಚುನಾವಣೆ ದಿನದಂದೂ ರಜೆ ನೀಡೋ ಹಿನ್ನೆಲೆ ಬುಕ್ಕಿಂಗ್ ತೆಗೆದುಕೊಳ್ಳದಂತೆ ಮನವಿ ಮಾಡಿದೆ. ಅತಿ ಹೆಚ್ಚು ಮತದಾನ ನಡೆಸೋ ಉದ್ದೇಶದಿಂದ ಬುಕ್ಕಿಂಗ್ ಕ್ಯಾನ್ಸಲ್ ಗೆ ಸೂಚನೆ ನೀಡಿದೆ.
ಜಿಲ್ಲಾಡಳಿತದಿಂದ ಹೊಂ ಸ್ಟೇ ಮಾಲೀಕರಿಗೆ ಲಿಖಿತವಾಗಿ ಜಿಲ್ಲಾಡಳಿತ ಸೂಚನೆ ನೀಡಿದೆ.
ಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಮೀನಾ ನಾಗರಾಜ್ ಮನವಿ ಮಾಡಿದ್ದಾರೆ.