6:46 PM Wednesday1 - May 2024
ಬ್ರೇಕಿಂಗ್ ನ್ಯೂಸ್
ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ…

ಇತ್ತೀಚಿನ ಸುದ್ದಿ

ಕಟೀಲು ದೇಗುಲ ಜಾತ್ರಾ ಮಹೋತ್ಸವ: ಏ.19, 20ರಂದು ರಸ್ತೆ ಸಂಚಾರದಲ್ಲಿ ಬದಲಾವಣೆ

18/04/2024, 21:19

ಮಂಗಳೂರು(reporterkarnataka.com): ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಏ.19 ಶುಕ್ರವಾರದಿಂದ 20 ಶನಿವಾರದ ವರೆಗೆ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಕಟೀಲು ಪರಿಸರದಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ ಮಾರ್ಪಡು ಮಾಡಲಾಗಿದೆ.
ಕಟಿಲು ಮುಖ್ಯ ರಸ್ತೆ (ರಥ ಬಿದಿ) ಯಲ್ಲಿ ಮಲ್ಲಿಗೆ ಅಂಗಡಿ ಕ್ರಾಸ್‍ನಿಂದ ದುರ್ಗಾ ಸಂಜೀವಿನಿ ಆಸ್ಪತ್ರೆ ಜಂಕ್ಷನ್ (ಕಲ್ಲಕುಮೇರು ಕ್ರಾಸ್) ವರೆಗೆ ವಾಹನ ಸಂಚಾರ ನಿಲುಗಡೆ ನಿಷೇಧಿಸಿದೆ. ಮಂಗಳೂರಿನಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆ ಅಂಗಡಿ ಕ್ರಾಸ್ ಬಳಿ ಎಡಕ್ಕೆ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಪಾರ್ಕಿಂಗ್ ಸ್ಥಳಗಳಿಗೆ ಚಲಿಸುವುದು. ಕಟೀಲಿನಿಂದ ಮಂಗಳೂರಿಗೆ ಬರುವ ವಾಹನಗಳು ಕಟೀಲು ಪದವಿ ಪೂರ್ವ ಕಾಲೇಜು ಮೈದಾನದ ಪಕ್ಕದ ರಸ್ತೆಯ ಮೂಲಕ ಬ್ಯಾಂಕ್ ಆಫ್ ಬರೋಡಾ ಎದುರುಗಡೆ ರಸ್ತೆಯಲ್ಲಿ ಚಲಿಸಿ ಬಜಪೆ-ಮಂಗಳೂರು ಕಡೆಗೆ ಸಂಚರಿಸುವುದು. ಸರ್ವಿಸ್ ಬಸ್ಸು, ಟೂರಿಸ್ಟ್ ಬಸ್ಸು, ಕಾರು ಹಾಗೂ ಇತರೆ ವಾಹನಗಳಿಗೆ ಬಸ್ ಸ್ಟ್ಯಾಂಡ್ ಹಿಂದುಗಡೆ ಇರುವ ಸಿತ್ಲಾ ಮೈದಾನ ಹಾಗೂ ಕಟೀಲು ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ಹಾಗೂ ಅಪರ ದಂಡಾಧಿಕಾರಿಗಳು ಆಗಿರುವ ಅನುಪಮ್ ಅಗ್ರವಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು