ಇತ್ತೀಚಿನ ಸುದ್ದಿ
ಬೈಕ್ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಪಾದಚಾರಿ ಮೇಲೆ ಹರಿದ ಟ್ಯಾಂಕರ್ : ಉತ್ತರ ಪ್ರದೇಶದ ನಿವಾಸಿ ಸ್ಥಳದಲ್ಲೇ ಸಾವು
19/04/2024, 14:36
ಮಂಗಳೂರು(reporterkarnataka.com): ನಗರದ ಕೋಡಿಕಲ್ ಸಮೀಪ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟ ವ್ಯಕ್ತಿಯ ಮೇಲೆ ಟ್ಯಾಂಕರ್ ಹರಿದು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಉತ್ತರ ಪ್ರದೇಶ ಮೂಲದ ಯಾದವ್ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಯಾದವ್ ಅವರು ಕೋಡಿಕಲ್ ಸಮೀಪದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ವೊಂದು ಅವರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದ ರಭಸಕ್ಕೆ ಯಾದವ್ ಅವರು ರಸ್ತೆಗೆ ಎಸೆಯಲ್ಪಟ್ಟರು. ದುರಾದೃಷ್ಟವಶಾತ್ ಅದೇ ಸಮಯದಲ್ಲಿ ಟ್ಯಾಂಕರ್ ಲಾರಿಯೊಂದು ಅವರ ಮೇಲೆ ಹರಿದು ಹೋದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ರಿವೋನ್ ಡಿಸೋಜ ಎಂದು ಗುರುತಿಸಲಾಗಿದೆ.
ಬೈಕಂಪಾಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಎಸಿಪಿ ನಜ್ಮಾ ಫಾರೂಕಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.