9:11 PM Thursday2 - May 2024
ಬ್ರೇಕಿಂಗ್ ನ್ಯೂಸ್
ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ

ಇತ್ತೀಚಿನ ಸುದ್ದಿ

ಕಲಾಕುಲ್: ಒಂದು ವರ್ಷದ ರಂಗ ತರಬೇತಿ ಡಿಪ್ಲೋಮಾ ಕೋರ್ಸ್

19/04/2024, 23:14

ಮಂಗಳೂರು(reporterkarnataka.com): ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದೊಡನೆ ಒಡಂಬಡಿಕೆ ಮಾಡಿಕೊಂಡ ಮಂಗಳೂರಿನ ಕೊಂಕಣಿ ನಾಟಕ ರೆಪರ್ಟರಿ ಕಲಾಕುಲ್ ಇಲ್ಲಿ ಒಂದು ವರ್ಷದ ರಂಗ ತರಬೇತಿ ಡಿಪ್ಲೋಮಾ ಕೋರ್ಸ್ ಆರಂಭಿಸಲಾಗುವುದು.
ಮಾಂಡ್ ಸೊಭಾಣ್ ಗುರಿಕಾರ ಎರಿಕ್ ಒಝೇರಿಯೊ ಅವರು ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕೊಂಕಣಿ ಸಾಂಸ್ಕೃತಿಕ ಕ್ಷೇತ್ರದ ದಿಗ್ಗಜ ಮಾಂಡ್ ಸೊಭಾಣ್ ಕೊಂಕಣಿ ರಂಗಭೂಮಿಗೆ ಮಹತ್ತರ ಕೊಡುಗೆ ನೀಡಿದೆ. `ಕಲಾಕುಲ್’ ಕೊಂಕಣಿಯ ಏಕಮಾತ್ರ ನಾಟಕ ರೆಪರ್ಟರಿಯನ್ನು ಆರಂಭಿಸಿ, ಆಧುನಿಕ ನಾಟಕಗಳನ್ನು ರಚಿಸಿ ಪ್ರದರ್ಶಿಸಿದ ಕೀರ್ತಿ ಇದಕ್ಕೆ ಸಲ್ಲುತ್ತದೆ. ಕಳೆದ 13 ವರ್ಷಗಳಿಂದ ಖಾಸಗಿಯಾಗಿ ಕೊಂಕಣಿ ರಂಗಭೂಮಿ ಡಿಪ್ಲೋಮಾ ನಡೆಸುತ್ತಿದ್ದು, ಇದುವರೆಗೆ ನೂರಾರು ವಿದ್ಯಾರ್ಥಿಗಳು ಈ ಡಿಪ್ಲೋಮಾ ಪಡೆದಿದ್ದಾರೆ. ಸುಮಾರು 50 ನಾಟಕ, ಕಿರುನಾಟಕಗಳ 250 ಕ್ಕೂ ಮಿಕ್ಕಿ ಪ್ರದರ್ಶನಗಳು ದೇಶ ವಿದೇಶಗಳಲ್ಲಿ ನಡೆದಿವೆ.
ಮಾಂಡ್ ಸೊಭಾಣ್ ಸಂಸ್ಥೆಯು `ಕಲಾಂಗಣ’ ಸಾಂಸ್ಕೃತಿಕ ಕೇಂದ್ರವನ್ನು ಸ್ಥಾಪಿಸಿದ್ದು ಇಲ್ಲಿ ಅನನ್ಯ ಬಯಲು ರಂಗ ಮಂದಿರದೊಡನೆ, ರಂಗ ತರಬೇತಿ ಮತ್ತು ಸಂಶೋಧನೆಗೆ ಅಗತ್ಯವಿರುವ ಎಲ್ಲಾ ಸವಲತ್ತುಗಳನ್ನು ಕಲ್ಪಿಸಲಾಗಿದೆ. ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ನಾಗೇಶ್ ವಿ. ಬೆಟ್ಟಕೋಟೆ ನೇತೃತ್ವದ ತಂಡ ಆಗಮಿಸಿ, ಪರಿಶೀಲಿಸಿದ ಬಳಿಕ ಕಲಾಕುಲ್ ವತಿಯಿಂದ ಒಂದು ವರ್ಷದ ರಂಗ ತರಬೇತಿ ಡಿಪ್ಲೋಮಾ ನಡೆಸಲು ಅನುಮೋದನೆ ನೀಡಿದೆ. ವಿಶ್ವವಿದ್ಯಾಲಯದ ನಿರ್ದೇಶನದ ಮೇರೆಗೆ ಆಡಳಿತ ಸಮಿತಿ ರಚಿಸಲಾಗಿದ್ದು, ಅದು ಸಭೆ ಸೇರಿ ಶೈಕ್ಷಣಿಕ ಮಾರ್ಗದರ್ಶಿ ಸೂತ್ರಗಳನ್ನು ರಚಿಸಿದೆ. ಅದರಂತೆ ಸೂಕ್ತ ತಯಾರಿ ನಡೆಸಿದ್ದು, ಎನ್ಎಸ್ಡಿ ಮತ್ತು ರಂಗಾಯಣದಿಂದ ಪದವಿ ಪಡೆದ ಉಪನ್ಯಾಸಕರನ್ನು ನೇಮಿಸಲಾಗುವುದು.
ಜುಲೈ 1ರಿಂದ ಆರಂಭವಾಗುವ 2024-25ನೇ ಶೈಕ್ಷಣಿಕ ವರ್ಷದಿಂದ ಈ ರಂಗ ತರಬೇತಿ ಡಿಪ್ಲೋಮಾ ಕೋರ್ಸನ್ನು ಆರಂಭಿಸಲಾಗುವುದು. ಕನಿಷ್ಠ ಪಿಯುಸಿ ವಿದ್ಯಾರ್ಹತೆ ಹೊಂದಿದ ಯಾವುದೇ ಮಾತೃಭಾಷಿಕ ವಿದ್ಯಾರ್ಥಿಗಳು ಈ ಡಿಪ್ಲೋಮಾ ಪಡೆಯಲು ಅರ್ಹರಾಗಿದ್ದು, ಒಂದು ವರ್ಷದ ಎರಡು ಸೆಮಿಸ್ಟರ್ನ ಈ ಕೋರ್ಸ್ ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ನಡೆಯಲಿದೆ. ಅಂತಿಮ ಪರೀಕ್ಷೆಯನ್ನು ವಿಶ್ವವಿದ್ಯಾಲಯವೇ ನಡೆಸುತ್ತದೆ. ಇದು ಪೂರ್ಣಕಾಲೀಕ ಕೋರ್ಸ್ ಆಗಿದ್ದು, ಈ ಕೋರ್ಸ್ ಪಡೆದವರಿಗೆ ಶಾಲೆ ಕಾಲೇಜುಗಳಲ್ಲಿ ರಂಗ ತರಬೇತಿ ಶಿಕ್ಷಕರಾಗಿ ದುಡಿಯಲು ಅವಕಾಶ ಲಭಿಸಲಿದೆ. ಅಗತ್ಯವುಳ್ಳವರಿಗೆ ಹಾಸ್ಟೆಲ್ ಸೌಲಭ್ಯವಿದೆ.
ಈ ಕೋರ್ಸ್ಗೆ ಸೇರಲಿಚ್ಛಿಸುವ ವಿದ್ಯಾರ್ಥಿಗಳು ಅರ್ಜಿಗಳನ್ನು www.manddsobhann.org ಡೌನ್ಲೋಡ್ ಮಾಡಿ, ಸರಿಯಾಗಿ ಭರ್ತಿ ಮಾಡಿ, ಸೂಕ್ತ ದಾಖಲೆಗಳೊಂದಿಗೆ, ಜೂನ್ 15ರೊಳಗೆ ಕಲಾಂಗಣ, ಮಕಾಳೆ, ಶಕ್ತಿನಗರ, ಮಂಗಳೂರು 575016 ಇಲ್ಲಿಗೆ ಅಂಚೆ ಮೂಲಕ ಅಥವಾ ಕೈಯಾರೆ ತಲುಪಿಸಬೇಕು.
ಹೆಚ್ಚಿನ ಮಾಹಿತಿಗಾಗಿ (63640 22333-ಆಡಳಿತಾಧಿಕಾರಿ ಅಥವಾ 81052 26626-ಕಚೇರಿ) ಇಲ್ಲಿ ಸಂಪರ್ಕಿಸಬಹುದು.

ಪತ್ರಿಕಾಗೋಷ್ಠಿಯಲ್ಲಿ
ಲುವಿ ಜೆ. ಪಿಂಟೊ (ಅಧ್ಯಕ್ಷ, ಮಾಂಡ್ ಸೊಭಾಣ್),
ವಿದುಷಿ ರಾಜಶ್ರೀ ಎಸ್ ಶೆಣೈ, (ಸದಸ್ಯರು, ಆಡಳಿತ ಸಮಿತಿ),
ಡಾ ಎಸ್ಬಿಎಮ್ ಪ್ರಸನ್ನ, (ಸದಸ್ಯರು, ಆಡಳಿತ ಸಮಿತಿ),
ಅರುಣ್ ರಾಜ್ ರೊಡ್ರಿಗಸ್ (ಆಡಳಿತಾಧಿಕಾರಿ, ಕಲಾಕುಲ್ ಮತ್ತು ಸದಸ್ಯ ಕಾರ್ಯದರ್ಶಿ, ಆಡಳಿತ ಸಮಿತಿ)

ಇತ್ತೀಚಿನ ಸುದ್ದಿ

ಜಾಹೀರಾತು