4:41 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಜೆಪ್ಪು ಮಾರ್ಕೆಟ್ -ಬೋಳಾರ ಮಾರಿಗುಡಿ ರಸ್ತೆಯಲ್ಲೇ ವಾಹನಗಳ ಪಾರ್ಕಿಂಗ್: ಪಾದಚಾರಿಗಳ ಗೋಳು ಕೇಳುವವರಿಲ್ಲ: ಸ್ಥಳೀಯ ಕಾರ್ಪೋರೇಟರ್ ಏನು ಮಾಡುತ್ತಿದ್ದಾರೆ?

20/04/2024, 15:58

ಮಂಗಳೂರು(reporterkarnataka.com): ನಗರದ ಯಾವುದೇ ಮೂಲೆಗೆ ಹೋಗಿ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸುವುದು ಸಾಮಾನ್ಯವಾಗಿ ಹೋಗಿದೆ. ಯಾರಿಗೆ ಏನೇ ತೊಂದರೆಯಾಗಲಿ, ತನ್ನ ವಾಹನ ಪಾರ್ಕಿಂಗ್ ಆದ್ರೆ ಸಾಕು ಎನ್ನುವ ಮನಸ್ಥಿತಿಯೇ ಇದಕ್ಕೆ ಕಾರಣ. ಇಂತಹ ಸಮಸ್ಯೆ ಜೆಪ್ಪು ಮಾರ್ಕೆಟ್- ಬೋಳಾರ ಮಾರಿಗುಡಿ ರಸ್ತೆಯಲ್ಲೂ ಜೀವಂತವಾಗಿದೆ.
ಜೆಪ್ಪು ಮಾರ್ಕೆಟ್ ನಿಂದ ಇತಿಹಾಸ ಪ್ರಸಿದ್ಧ ಬೋಳಾರ ಮಾರಿಗುಡಿ ದೇವಸ್ಥಾನದ ರಥ ಬೀದಿ ರಸ್ತೆ ವರೆಗೆ ವಾಹನಗಳನ್ನು ರಸ್ತೆಯಲ್ಲಿ ಮತ್ತು ಪಾದಚಾರಿಗಳು ನಡೆದಾಡುವ ಜಾಗದಲ್ಲಿ ಪಾರ್ಕಿಂಗ್ ಮಾಡುವುದು ಮಾಮೂಲಿಯಾಗಿದೆ. ಇದರಿಂದ ಪಾದಚಾರಿಗಳು
ಸಂಕಷ್ಟ ಎದುರಿಸುವಂತಾಗಿದೆ.
ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಮಂಗಳಾದೇವಿ ಮತ್ತು ಶ್ರೀ ಕ್ಷೇತ್ರ ಬೋಳಾರ ಮಾರಿಗುಡಿ ತೆರಳುವ ಬಸ್ಸುಗಳು ಸಂಚರಿಸುವ ಈ ರಸ್ತೆಯು ಜನನಿಬಿಡ ಪ್ರದೇಶವಾಗಿದೆ. ಎಳೆಯ ಮಕ್ಕಳು, ವಯೋ ವೃದ್ಧರು ಈ ಭಾಗದಲ್ಲಿ ತೆರಳುವುದು ಕಷ್ಟಕರವಾಗಿದೆ. ಘನ ವಾಹನಗಳು ಸಂಚರಿಸುವಾಗ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವ ದ್ವಿಚಕ್ರ ವಾಹನಗಳಿಂದ ಪಾದಚಾರಿಗಳಿಗೆ ನಡೆದಾಡಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಜೆಪ್ಪು ಮಾರ್ಕೆಟ್,ಮಹಾಲಸಾ ಕಂಪ್ಯೂಟರ್ ಕೇಂದ್ರ, ಪ್ರಧಾನ ಮಂತ್ರಿ ಜನೌಷಧಿ,ಬ್ಯಾಂಕುಗಳಿಗೆ ನಿತ್ಯ ದೈನಂದಿನ ತಮ್ಮ ವ್ಯವಹಾರಗಳಿಗೆ ತೆರಳುವವರಿಗೆ ಈ ಭಾಗದಲ್ಲಿ ನಡೆದಾಡುವುದು ದುಸ್ತರ ಎನಿಸಿದೆ.
ಆಯಾಯ ಕಟ್ಟಡಗಳಲ್ಲಿ ಪಾರ್ಕಿಂಗ್ ಮಾಡದೇ ಜನರು ನಡೆದಾಡುವ ಜಾಗದಲ್ಲಿ ಮತ್ತು ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವವರಿಗೆ ಸಂಬಂಧ ಪಟ್ಟವರು ದಂಡ ವಿಧಿಸುವ ಅಗತ್ಯತೆ ಇದೆ. ಪ್ರಮುಖವಾಗಿ ಈ ಪ್ರದೇಶದ ಸ್ಥಳೀಯ ಜನಪ್ರತಿನಿಧಿಗಳು ಪಾದಚಾರಿಗಳಿಗೆ ನಡೆದಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಿ ಪಾದಚಾರಿಗಳಿಗೆ ಪ್ರಾಣಕ್ಕೆ ಸಂಕಷ್ಟ ಎದುರಾಗದಂತೆ ಕ್ರಮ ಕೈಗೊಳ್ಳಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು