9:48 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಮಂಗಳೂರಿನ ವೈಭವ ಮರುಕಳಿಸಲು ಕಾಂಗ್ರೆಸ್ ಗೆಲ್ಲಿಸಿ: ತೋಡಾರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಪದ್ಮರಾಜ್ ಆರ್. ಪೂಜಾರಿ

21/04/2024, 22:20

ಮೂಡುಬಿದರೆ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತೋಡಾರಿನಲ್ಲಿ ಕಾರ್ಯಕರ್ತರ ಸಭೆ ನಡೆಯಿತು.


ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಕಾಂಗ್ರೆಸ್ ಯಾವತ್ತೂ ಜಾತಿ, ಧರ್ಮದ ವಿಚಾರದಲ್ಲಿ ಚುನಾವಣೆ ಎದುರಿಸಿಲ್ಲ. ಅಭಿವೃದ್ಧಿ ವಿಚಾರವಾಗಿ ಮಾತ್ರ ಚುನಾವಣೆ ಎದುರಿಸಿ, ಉತ್ತಮ ಆಡಳಿತವನ್ನು ನೀಡಿದೆ. ನಮ್ಮ ಭವಿಷ್ಯ, ಮಕ್ಕಳ ಜೀವನವನ್ನು ನಿರ್ಧರಿಸುವ ಚುನಾವಣೆ ಮತ್ತೊಮ್ಮೆ ಬಂದಿದೆ. ವೈಭವದಿಂದ ಮೆರೆಯುತ್ತಿದ್ದ ಮಂಗಳೂರನ್ನು ಮತ್ತೆ ಅದೇ ವೈಭವಕ್ಕೆ ಕೊಂಡೊಯ್ಯುವ ಅಗತ್ಯವಿದೆ ಎಂದರು.
ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ನಾನು ಶಾಸಕನಾಗಿದ್ದಾಗಲೇ ಹೊಸಬರಿಗೆ ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದೆ. ಇದೀಗ ಯುವಕನಿಗೆ, ವಕೀಲನಿಗೆ ಅವಕಾಶ ನೀಡಲಾಗಿದೆ. ಸಮರ್ಥ ಅಭ್ಯರ್ಥಿ ಮಾತ್ರವಲ್ಲ, ನಾವು ಗೌರವಿಸುವಂತಹ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ. ಅವರನ್ನು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿಕೊಂಡರು.
ಮಿಥುನ್ ರೈ ಮಾತನಾಡಿ, ಹಿಂದುಳಿದ ವರ್ಗದ ಧ್ವನಿಯಾಗಿರುವ ಪದ್ಮರಾಜ್ ಆರ್. ಪೂಜಾರಿ ಅವರ ಗೆಲುವಿಗಾಗಿ ಈಗ ನಾವೆಲ್ಲಾ ಧ್ವನಿಯಾಗಬೇಕು ಎಂದರು.
ಜಿಲ್ಲಾ ವಕ್ಫ್ ಅಧ್ಯಕ್ಷ ಅಬ್ದುಲ್ ಸಲಾಂ ತೋಡಾರ್, ರಾಜೇಶ್ ಅಡ್ಲಕೆರೆ, ಚಂದ್ರಹಾಸ್ ಸಾಧು ಸನಿಲ್, ಮೂಡುಬಿದರೆ ಉಸ್ತುವಾರಿ, ಗುರುರಾಜ್, ಬ್ಲಾಕ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ನಜೀರ್, ಇಸಾಕ್ ಹಾಜಿ, ಲತೀಫ್, ಆಸೀಫ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು