8:19 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಮಂಗಳೂರಿನ‌ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸಂತ ಜೋಸೆಫ್ ವಾರ್ಡಿನ ವಾರ್ಷಿಕ ಹಬ್ಬ

22/04/2024, 14:16

ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಚರ್ಚಿನ ಸಂತ ಜೋಸೆಫ್ ವಾರ್ಡಿನ ವಾರ್ಷಿಕ ಹಬ್ಬ ವಾರ್ಡಿನ ವಿನ್ಸೆಂಟ್ ಪಿಂಟೋ ಅವರ ತೆರೆದ ಮೈದಾನದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಅಲ್ಬನ್ ಡಿಸೋಜ ಅವರು ವಹಿಸಿದ್ದು, ಈ ವಾರ್ಡ್ ಬಹಳಷ್ಟು ಪ್ರಗತಿ ಹೊಂದಿದೆ. ವಾರ್ಡಿನ ಸರ್ವತೋಮುಖ ಅಭಿವೃದ್ದಿ ನಾವು ನೋಡುತ್ತಾ ಇದ್ದೇವೆ ಎಂದು ಶ್ಲಾಘಿಸಿ ಶುಭ ಹಾರೈಸಿದರು.
ಚರ್ಚಿನ ಪಾಲನಾ ಸಮಿತಿ ಉಪಾಧ್ಯಕ್ಷರಾದ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೊ, 21 ಆಯೋಗಗಳ ಸಂಯೋಜಕ ಜೊಸ್ಲಿನ್ ಲೋಬೊ ಉಪಸ್ಥಿತರಿದ್ದು, ಶುಭ ಹಾರೈಸಿದರು.
ವಾರ್ಡಿನ ಮುಖ್ಯಸ್ಥೆ ಶೀಲಾ ಡಿಸೋಜ ಅವರು ಅತಿಥಿಗಳನ್ನು ಸ್ವಾಗತಿಸಿದರು. ವಾರ್ಡಿನ ಪರವಾಗಿ ಕಳೆದ 7 ವರ್ಷಗಳಿಂದ ನಿರಂತರ ವಾರ್ಡಿನ ಮುಖ್ಯಸ್ಥರಾಗಿ ಸೇವೆಯನ್ನು ನೀಡುತ್ತಿರುವ ಶೀಲಾ ಡಿಸೋಜ ಅವರನ್ನು ಫಲ- ಪುಷ್ಟ ಹಾಗೂ ಶಾಲು ಹೊದೆಸಿ ಸನ್ಮಾನಿಸಲಾಯಿತು. ವಾರ್ಡಿನ ಪ್ರತಿನಿಧಿ ಸವಿತಾ ಡಿಕುನ್ನಾ ಅವರು ವರದಿ ವಾಚಿಸಿದರು. ಮತ್ತೋರ್ವ ಪ್ರತಿನಿಧಿ ಅರುಣ್ ಪಿಂಟೋ ಉಪಸ್ಥಿತರಿದ್ದರು. ವಿಲ್ಮಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.
ವಾರ್ಡಿನ ಎಲ್ಲ ವಯಸ್ಸಿನ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಇತರ ವಾರ್ಡಿನ ಮುಖ್ಯಸ್ಥರು, ಚರ್ಚಿನ ಸಂಘ- ಸಂಸ್ಥೆಗಳ
ಮುಖ್ಯಸ್ಥರು ಭಾಗವಹಿಸಿದ್ದರು. ಸಹ ಭೋಜನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು