11:35 PM Friday3 - May 2024
ಬ್ರೇಕಿಂಗ್ ನ್ಯೂಸ್
ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ…

ಇತ್ತೀಚಿನ ಸುದ್ದಿ

ಎದುರಾಳಿಗಳ ಅಪಪ್ರಚಾರದ ಸವಾಲನ್ನು ತಾಳ್ಮೆಯಿಂದ ಎದುರಿಸೋಣ; ಗೆಲುವು ಖಚಿತ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

23/04/2024, 17:41

ಬಂಟ್ವಾಳ(reporterkarnataka.com): ವರದಿಗಳ ಪ್ರಕಾರವೂ ಕಾಂಗ್ರೆಸ್ ಗೆಲುವು ಖಾತ್ರಿಯಾಗಿದೆ. ಹಾಗೆಂದು ನಾವು ಜಾಗೃತರಾಗಿ ಇರಬೇಕಾಗಿದೆ. ಎದುರಾಳಿ ಪಕ್ಷದವರು ಗೆಲುವಿಗಾಗಿ ಅಪಪ್ರಚಾರದ ಹಾದಿ ಹಿಡಿಯುತ್ತಿದ್ದಾರೆ‌. ಮನೆಮನೆಗೆ ತೆರಳಿ ಗ್ರಂಥ, ತಾಳಿ ಹಿಡಿದು ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂಬ ಮಾಹಿತಿ ಇದೆ. ಆದ್ದರಿಂದ ತಾಳ್ಮೆಯಿಂದ ಸವಾಲನ್ನು ಎದುರಿಸಲು ಸಿದ್ಧರಾಗೋಣ. ಮುಂದಿನ ಎರಡು – ಮೂರು ದಿನ ಎಚ್ಚರಿಕೆಯಿಂದ ಕಾರ್ಯೋನ್ಮುಖರಾಗಬೇಕಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ವ್ಯಾಪ್ತಿಯ ವಿವಿಧೆಡೆ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.


ದ್ವೇಷದ ರಾಜಕಾರಣ ನಾವೆಂದೂ ಮಾಡಿಲ್ಲ. ಅದರ ಅಗತ್ಯವೂ ನಮಗಿಲ್ಲ. ಕಾಂಗ್ರೆಸ್ ಸರಕಾರದ ಸಾಧನೆ ಹಾಗೂ ನಾವು ಅಭಿವೃದ್ಧಿ ದೃಷ್ಟಿಯಿಂದ ಹಾಕಿಕೊಂಡಿರುವ ಯೋಜನೆಗಳನ್ನು ಜನರಿಗೆ ತಿಳಿಸಿ. ಖಂಡಿತವಾಗಿಯೂ ಜಿಲ್ಲೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಸಾಮರಸ್ಯದ ಗತವೈಭವ ಮರಳಿ ಬರಲಿದೆ ಎಂದು ಅವರು ನುಡಿದರು.
ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಮಾಜಿ ಸಚಿವ ಬಿ. ರಮಾನಾಥ ರೈ ಸೇರಿದಂತೆ ಪ್ರಮುಖರು
ಅಲ್ಲಿಪಾದೆ, ನಾವೂರು, ಅಮ್ಟಾಡಿ, ಮೂಲರಪಟ್ಣ, ಕರ್ಪೆ ಶ್ರೀ ರಾಮಾಂಜನೇಯ ಭಜನಾ ಮಂದಿರ, ಸಿದ್ಧಕಟ್ಟೆ, ರಾಯಿ, ಪಂಜಿಕಲ್ಲು, ಕುಕ್ಕಿಪ್ಪಾಡಿ, ಬಸ್ತಿಕೋಡಿ, ಇರ್ವತ್ತೂರುಪದವು, ಕಾವಲ್ ಕಟ್ಟೆ, ವಗ್ಗ ಮೊದಲಾದ ಪ್ರದೇಶಗಳ ಮತದಾರ, ಕಾರ್ಯಕರ್ತರ ಬಳಿಗೆ ತೆರಳಿ ಮಾತನಾಡಿದರು.
ಮಾಜಿ ಸಚಿವ ಬಿ. ರಮಾನಾಥ ರೈ, ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಸುಧೀಪ್ ಕುಮಾರ್ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಜಿಲ್ಲಾ ಪ್ರಚಾರ ಸಮಿತಿಯ ಪಿಯೂಷ್ ರೋಡ್ರಿಗಸ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಲವೀನಾ ಮೋರಸ್, ಪಾಣೆಮಂಗಳೂರು ವಲಯ ಅಧ್ಯಕ್ಷೆ ಜಯಂತಿ ಪೂಜಾರಿ, ಸುದರ್ಶನ್ ಜೈನ್, ಬಂಟ್ವಾಳ ಬ್ಲಾಕ್ ಪ್ರಚಾರ ಸಮಿತಿಯ ಜಗದೀಶ್ ಕೊಯಿಲ, ಮಾಯಿಲಪ್ಪ ಸಾಲ್ಯಾನ್, ಕೈಲಾರ್ ಇಬ್ರಾಹಿಂ, ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಜೋರಾ, ಇಬ್ರಾಹಿಂ ನವಾಜ್, ಮಧುಸೂಧನ್ ಶೆಣೈ, ಸಂಜೀವ ಗೌಡ, ಚೆನ್ನಪ್ಪ ಸಾಲ್ಯಾನ್, ಅಬ್ದುಲ್ ರಹಿಮಾನ್, ಪರಮೇಶ್ವರ್ ನಾಯಕ್, ಜಯಂತ್, ಮಲ್ಲಿಕಾ ವಿ. ಪೂಜಾರಿ, ಸಂಜೀವ ಪೂಜಾರಿ, ನಾವೂರು ವಲಯ ಅಧ್ಯಕ್ಷ ವಿಜಯ, ಉಮೇಶ್ ಕುಲಾಲ್, ಸುರೇಶ್ ಕುಲಾಲ್, ಅಶ್ವನಿ ಕುಮಾರ್, ಕರ್ಪೆ ಶ್ರೀ ರಾಮಾಂಜನೇಯ ಭಜನಾ ಮಂದಿರದ ಅಧ್ಯಕ್ಷ ರಮೇಶ್, ಉಸ್ತುವಾರಿ ಶಶಿಧರ್ ಪ್ರಭು, ಉಪಾಧ್ಯಕ್ಷ ರಮೇಶ್, ದಯಾನಂದ ಗೌಡ, ಪ್ರಕಾಶ್ ಜೈನ್, ವಿಕ್ಟರ್, ದಿನೇಶ್ ಶೆಟ್ಟಿ, ಮೋಹನ್ ಶೆಟ್ಟಿ, ಕೃಷ್ಣಪ್ಪ ಕುಲಾಲ್, ವಿಶ್ವನಾಥ ಶೆಟ್ಟಿ, ದೇವಪ್ಪ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು