ಇತ್ತೀಚಿನ ಸುದ್ದಿ
ಹುಷಾರ್; ರಾಜ್ಯದಲ್ಲಿ ಮುಂದಿನ 5 ದಿನಗಳಲ್ಲಿ ಮತ್ತೆ ತಾಪಮಾನ ಏರಿಕೆ ಸಾಧ್ಯತೆ: ಐಎಂಡಿ ಎಚ್ಚರಿಕೆ
24/04/2024, 08:12
ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮುಂದಿನ 5 ದಿನಗಳಲ್ಲಿ ಮತ್ತೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಏಪ್ರಿಲ್ 23 ರಿಂದ 26 ರವರೆಗೆ ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣದ ಪರಿಸ್ಥಿತಿಗಳು ಇರುತ್ತವೆ. ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.