3:52 AM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ನಂಜನಗೂಡು: ಬಹಿರಂಗ ಪ್ರಚಾರ ಕೊನೆಯ ದಿನ ಬಿಜೆಪಿಯಿಂದ ಅಬ್ಬರದ ಪ್ರಚಾರ

24/04/2024, 19:29

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಹಿರಂಗ ಪ್ರಚಾರದ ಕೊನೆಯ ದಿನದಂದು ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಪಕ್ಷದ ಕಾರ್ಯಕರ್ತ ಮುಖಂಡರು ಬಿರುಸಿನ ಮತ ಪ್ರಚಾರ ನಡೆಸಿದರು.
ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಮ್ಮರಗಾಲ, ಹೆಡತಲೆ ,ಬದನವಾಳು, ದೇವರಸನ ಹಳ್ಳಿ ಸೇರಿದಂತೆ ವಿವಿಧೆಡೆ ಬಿಜೆಪಿ ಮುಖಂಡರು ಪಾದಯಾತ್ರೆ ಮಾಡುವ ಮೂಲಕ ಮತಯಾಚನೆ ನಡೆಸಿದರು.
ರಾಜ್ಯ ಬಿಜೆಪಿ ಮುಖಂಡ ಅಶೋಕ್ ಹಾಗೂ ಜಿಲ್ಲಾ ಒಬಿಸಿ ಘಟಕದ ಕಾರ್ಯದರ್ಶಿ ಹೆಮ್ಮರಗಾಲ ಸೋಮಣ್ಣ ನೇತೃತ್ವದಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು.


ಪಾದಯಾತ್ರೆಯಲ್ಲಿ ಪಿಎಂ ನರೇಂದ್ರ ಮೋದಿ ಹಾಗೂ ಪಕ್ಷದ ಮುಖಂಡರುಗಳಿಗೆ ಜಯಕಾರದ ಘೋಷಣೆಗಳನ್ನು ಕೂಗಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ನಂತರ ರಾಜ್ಯ ಬಿಜೆಪಿ ಮುಖಂಡ ಅಶೋಕ್ ಹಾಗೂ ಜಿಲ್ಲಾ ಒಬಿಸಿ ಮುಖಂಡ ಸೋಮಣ್ಣ ಮಾತನಾಡಿ ಈ ಕ್ಷೇತ್ರದ ಅಭಿವೃದ್ಧಿ ಹರಿಕಾರರಾದ ಮಾಜಿ ಶಾಸಕ ಹರ್ಷವರ್ಧನ್ ಅವರು ಈ ಗ್ರಾಮಕ್ಕೆ ಸುಮಾರು 13 ಕೋಟಿ ರೂಪಾಯಿಗಳ ಅನುದಾನ ನೀಡಿ ಗ್ರಾಮದ ಅಭಿವೃದ್ಧಿ ಪಡಿಸಿದ್ದರು. ಆದರೆ ರಾಜ್ಯ ಸರ್ಕಾರದ ಸುಳ್ಳು ಗ್ಯಾರಂಟಿ ಮತ್ತು ಪೊಳ್ಳು ಭರವಸೆಗಳು ಅವರನ್ನು ಸೋಲುವಂತೆ ಮಾಡಿತು ಎಂದು ವಿಷಾದ ವ್ಯಕ್ತಪಡಿಸಿದರು.
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ತಂದಿದ್ದ ಹಲವಾರು ಜನಪರ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಿ, ಜನರಿಗೆ ಮೋಸ ಮಾಡಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ 60 ವರ್ಷಗಳಲ್ಲಿ ಮಾಡದ ಅಭಿವೃದ್ಧಿಯನ್ನು ಮೋದಿಯವರು 10 ವರ್ಷದಲ್ಲೇ ಮಾಡಿ ದೇಶದಲ್ಲಿ ಹಲವಾರು ಬದಲಾವಣೆ ತಂದಿದ್ದಾರೆ. ಅದಕ್ಕಾಗಿ ಮತ್ತೊಮ್ಮೆ ಅವರನ್ನು ಪ್ರಧಾನ ಮಂತ್ರಿಗಳನ್ನಾಗಿ ಮಾಡಲು ನಮ್ಮ ಪಕ್ಷದ ಅಭ್ಯರ್ಥಿ ಬಾಲರಾಜ್ ಅವರನ್ನು ಗೆಲ್ಲಿಸಿ ಕೊಡುವಂತೆ ಕಾರ್ಯಕರ್ತ ಮುಖಂಡರಲ್ಲಿ ಮನವಿ ಮಾಡಿಕೊಂಡರು.
ಪ್ರಚಾರಕ್ಕೆ ಬಂದ ಎಲ್ಲ ಮುಖಂಡರುಗಳಿಗೆ ಗ್ರಾಮಸ್ಥರು ಶಾಲುಹೊದಿಸಿ ಮಾಲಾರ್ಪಣೆ ಮಾಡಿ ಗೌರವಿಸಿದರು.
ಈ ಸಂದರ್ಭ ಮಂಡಲ ಅಧ್ಯಕ್ಷರಾದ ಕೆಂಡಗಣ್ಣಪ್ಪ ಕಾರ್ಯದರ್ಶಿ ಪುಟ್ಟಸ್ವಾಮಿ ಮುಖಂಡರುಗಳಾದ ಬದನವಾಳು ಮಹೇಶ್, ಮಸಗೆ ರಾಜು, ಮಹಾದೇವಸ್ವಾಮಿ ಮುಳ್ಳೂರು ಶೇಖರ್, ಸುರೇಶ್, ಕಾಳಪ್ಪ ಸೇರಿದಂತೆ ಹಲವಾರು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು