1:35 AM Sunday12 - May 2024
ಬ್ರೇಕಿಂಗ್ ನ್ಯೂಸ್
ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

28/04/2024, 14:06

ಲಕ್ಷ್ಮಣ ಶಿವರಾಯ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸ್ಥಗಿತಗೊಂಡಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕೋಮುಗಲಭೆ, ಬಾಂಬ್ ಸ್ಫೋಟದಂತಹ ಪ್ರಕರಣಗಳು ಹೆಚ್ಚುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಭಾನುವಾರ
ಬಿಜೆಪಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು
ಮಾತನಾಡಿದರು.
ದೇಶದಲ್ಲಿ ಕಾಂಗ್ರೆಸ್ ಸರಕಾರ ಇರುವ ಕಡೆಗಳೆಲ್ಲ ಕಾನೂನು ಸಮಸ್ಯೆ ಎದುರಾಗಿದೆ. ಕರ್ನಾಟಕದ ಪರಿಸ್ಥಿತಿ ಚಿಂತಾಜನಕವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ನಿಂದ ತುಷ್ಠೀಕರಣ ರಾಜಕಾರಣ ನಡೆಯುತ್ತಿದೆ. ಕೋಮುಗಲಭೆ, ಬಾಂಬ್ ಸ್ಫೋಟದಂತಹ ಪ್ರಕರಣಗಳು ಹೆಚ್ಚುತ್ತಿವೆ. ಬೆಳಗಾವಿಯಲ್ಲಿ ಮಹಿಳೆಯ ಮೇಲೆ ದಾಳಿ ನಡೆಸಲಾಯಿತು. ಚಿಕ್ಕೋಡಿಯಲ್ಲಿ ಜೈನಮುನಿ ಹತ್ಯೆಯಾಗಿದೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ನಡೆದಿದೆ ಎಂದು ಪ್ರಧಾನಿ ಕಿಡಿ ಕಾರಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ನಿಂತು ಹೋಗಿದೆ. ರಸ್ತೆ, ನೀರು, ಬರ, ಉದ್ಯೋಗ ಸಮಸ್ಯೆಗಳು ರಾಜ್ಯದಲ್ಲಿ ತಾಂಡವವಾಡುತ್ತಿವೆ ಎಂದರು.
ದೇಶದಲ್ಲಿ ಕಳೆದ 10 ವರ್ಷದಲ್ಲಿ 25 ಕೋಟಿ ಜನರು ಬಡತನದಿಂದ ಹೊರಗೆ ಬಂದಿದ್ದಾರೆ. ಹಾಗಾಗಿ ಜನರ ವಿಶ್ವಾಸ ವೃದ್ಧಿಯಾಗಿದೆ. ಬಡವರ ಕಲ್ಯಾಣಕ್ಕಾಗಿ ಮತ್ತೊಮ್ಮೆ ಬಿಜೆಪಿ ಸರಕಾರ ಬರಬೇಕು. ಭಾರತ ಇನ್ನಷ್ಟು ಬಲಾಢ್ಯವಾಗಲಿದೆ, ಭಾರತೀಯರು ಖುಷಿಯಾಗುತ್ತಾರೆ ಎಂದು ಮೋದಿ ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಾ.ಪ್ರಭಾಕರ ಕೋರೆ, ಅಣ್ಣಾಸಾಹೇಬ ಜೊಲ್ಲೆ, ಜಗದೀಶ ಶೆಟ್ಟರ್, ಬಾಲಚಂದ್ರ ಜಾರಕಿಹೊಳಿ, ಈರಪ್ಪ ಕಡಾಡಿ, ಅಭಯ ಪಾಟೀಲ, ರಮೇಶ ಜಾರಕಿಹೊಳಿ ಸೇರಿದಂತೆ ಜಿಲ್ಲೆಯ ಶಾಸಕರು, ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು