ಇತ್ತೀಚಿನ ಸುದ್ದಿ
ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಯುವ ಖೈದಿ ಆತ್ಮಹತ್ಯೆ: ಡ್ರಗ್ಸ್ ಪ್ರಕರಣದಲ್ಲಿ ಬಂಧನ
06/05/2024, 22:20
ಮಂಗಳೂರು(reporterkarnataka.com): ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲ್ಪಟ್ಟಿದ್ದ ವಿಚಾರಣಾಧೀನ ಯುವ ಖೈದಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಾಸರಗೋಡಿನ ಬಂದ್ಯೋಡು ನಿವಾಸಿಯಾದ 24ರ ಹರೆಯದ ಮಹಮ್ಮದ್ ನೌಫಾಲ್ ಆತ್ಮಹತ್ಯೆಗೆ ಶರಣಾದ ಯುವ ಖೈದಿ. ಈತ ಡ್ರಗ್ಸ್ ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದ. ಡ್ರಗ್ಸ್ ಮಾರಾಟದ ಜತೆಗೆ ಡ್ರಗ್ಸ್ ಸೇವನೆಯ ಚಟವನ್ನೂ ಹೊಂದಿದ್ದ ಎನ್ನಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಚಿಕಿತ್ಸೆಗಾಗಿ ಏಪ್ರಿಲ್ 25ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಾನಸಿಕ ಖಿನ್ನತೆಯಿಂದ ಇಂದು ಮುಂಜಾನೆ 4 ಗಂಟೆಯ ವೇಳೆಗೆ ಬೆಡ್ ಶೀಟ್ ಸಹಾಯದಿಂದ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.