ಇತ್ತೀಚಿನ ಸುದ್ದಿ
ಎಸ್ಸೆಸ್ಸೆಲ್ಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ದ್ವಿತೀಯ; ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಟಾಪರ್
09/05/2024, 12:05
ಬೆಂಗಳೂರು(reporterkarnataka.com):ರಾಜ್ಯಮಟ್ಟದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಪ್ರಥಮ ಹಾಗೂ ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಪಡೆದಿದೆ. ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಅವರು ಫಲಿತಾಂಶ ಪ್ರಕಟಿಸಿದ್ದಾರೆ.
ರಾಜ್ಯದಲ್ಲಿ ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಬರೆದಿದ್ದಾರೆ. ಇದರಲ್ಲಿ 4,41,910 ಬಾಲಕರು ಮತ್ತು 4,28,058 ಬಾಲಕಿಯರು.
ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ದ್ವಿತೀಯ ಸ್ಥಾನ ವನ್ನು ದಕ್ಷಿಣ ಕನ್ನಡ ಜಿಲ್ಲೆ ಪಡೆದಿದೆ.
ಫಲಿತಾಂಶವನ್ನು sslc.karnataka.gov.in ಅಥವಾ kseab.karnataka.gov.in
ವೆಬ್ಸೈಟ್ನಲ್ಲಿ ಪರಿಶೀಲಿಸಬಹುದಾಗಿದೆ.
ವಿದ್ಯಾರ್ಥಿಯ ನೋಂದಾಯಿತ ಮೊಬೈಲ್ ನಂಬರ್ಗೂ ಸಹ ಫಲಿತಾಂಶದ ವಿವರದ ಎಸ್ಎಂಎಸ್ ಕಳುಹಿಸಲಾಗುವುದು ಎಂದು ಮಂಜುಶ್ರೀ ತಿಳಿಸಿದರು.
ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು 625ಕ್ಕೆ 625 ಅಂಕ ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದಾರೆ. ಇವರು ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮೆಳ್ಳಿಗೇರಿಯವರಾಗಿದ್ದಾರೆ. ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ.
ದಕ್ಷಿಣ ಕನ್ನಡ ಜಿಲ್ಲೆ ಶೇ 92.12, ಶಿವಮೊಗ್ಗ ಜಿಲ್ಲೆ ಶೇ 88.67, ಕೊಡಗು ಜಿಲ್ಲೆ ಶೇ 88.67 ರ ಫಲಿತಾಂಶ ದಾಖಲಿಸಿವೆ.