ಇತ್ತೀಚಿನ ಸುದ್ದಿ
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಎನ್ಐಎ ತಂಡದಿಂದ 4ನೇ ಆರೋಪಿಯ ಸಕಲೇಶಪುರದಲ್ಲಿ ಬಂಧನ
10/05/2024, 13:33
ಮಂಗಳೂರು(reporterkarnataka.com): ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ಆರೋಪಿಯನ್ನು ಎನ್ಐಎ ತಂಡ ಬಂಧಿಸಿದೆ.
ಸುಳ್ಯದ ಶಾಂತಿ ನಗರ ನಿವಾಸಿಯಾದ ಮುಸ್ತಫಾ ಪೈಚಾರ್ ಎಂಬಾತನನ್ನು ಎನ್ಐಎ ತಂಡ ಹಾಸನದ ಸಕಲೇಶಪುರ ಬಳಿ ದಸ್ತಗಿರಿ ಮಾಡಿದೆ. ಈತ ಪಿಎಫ್ಐ ಮುಖಂಡ ಎನ್ನಲಾಗಿದೆ. ಆರೋಪಿಯು ಹಾಸನ ಜಿಲ್ಲೆಯ ಸಕಲೇಶಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲೆ ಮರೆಸಿಕೊಂಡಿದ್ದ. ಎನ್ಐಎ ಇನ್ಸ್ ಪೆಕ್ಟರ್ ಷಣ್ಮುಗಂ ಅವರ ತಂಡ ಆರೋಪಿಯ ಬಂಧಿಸುವಲ್ಲಿ ಯಶಸ್ವಿಯಾಗಿದೆ.ಪ್ರವೀಣ್ ನೆಟ್ಟಾರ್ ಅವರನ್ನು ದುಷ್ಕರ್ಮಿಗಳು ಅಮಾನುಷವಾಗಿ ಹತ್ಯೆ ಮಾಡಿದ್ದರು.ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್ಐಎ ಕಚೇರಿಗೆಯತ್ತ ಕೊಂಡೊಯ್ದಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಆರೋಪಿ ಮುಸ್ತಫಾ ಪೈಚಾರ್ ತಲೆಮರೆಸಿಕೊಂಡಿದ್ದು ಹೀಗಾಗಿ ಆತನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್ಐಎ ಅಧಿಕಾರಿಗಳು ಘೋಷಿಸಿದ್ದರು.