5:13 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

25ನೇ ವರ್ಷದ ಇಂಡಿಪೆಂಡೆನ್ಸ್ ಕಪ್ ಫುಟ್‌ಬಾಲ್ ಪಂದ್ಯಕ್ಕೆ ಸ್ಪೀಕರ್ ಖಾದರ್ ಚಾಲನೆ: ಡ್ರಗ್ಸ್ ವಿರುದ್ಧ ಜಾಗೃತಿ ಜಾಥಾ

22/07/2023, 21:35

ಮಂಗಳೂರು(reporterkarnataka.com): ಅರೋಗ್ಯಪೂರ್ಣ ಶರೀರಕ್ಕೆ ಆಟೋಟ ಸ್ಪರ್ಧೆಗಳು ಸಹಕರಿಯಾಗಿದ್ದು ಯುವಜನರು ಫುಟ್ಬಾಲ್, ಕಬಡ್ಡಿಯಂತಹ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.


ಅವರು ದಕ್ಷಿಣ ಕನ್ನಡ ಜಿಲ್ಲಾ ಫುಟ್‌ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ನಡೆಯುವ 25ನೇ ವರ್ಷದ ಇಂಡಿಪೆಂಡೆನ್ಸ್ ಕಪ್ ಫುಟ್‌ಬಾಲ್ ಪಂದ್ಯಕ್ಕೆ ಶನಿವಾರ ನಗರದ ನೆಹರೂ ಮೈದಾನ ಫುಟ್‌ಬಾಲ್ ಗ್ರೌಂಡ್‌ನಲ್ಲಿ ಚಾಲನೆ ನೀಡಿ ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಮೇಯರ್ ಜಯಾನಂದ ಅಂಚನ್ ಮಾತನಾಡಿ, ದ ಕ ಜಿಲ್ಲಾ ಫುಟ್ಬಾಲ್ ಸಂಸ್ಥೆಯು ನಿರಂತರವಾಗಿ ಫುಟ್ಬಾಲ್ ಪಂದ್ಯಾಟವನ್ನು ಆಯೋಜಿಸಿ ಯುವಕರನ್ನು ಕ್ರೀಡಾಸಕ್ತಿಗೆ ತೊಡಗಿಸುವ ಕಾರ್ಯ ಅಭಿನಂದನೀಯ ಎಂದರು.
ದ.ಕ ಜಿಲ್ಲಾ ಫುಟ್‌ಬಾಲ್ ಅಧ್ಯಕ್ಷ ಅಸೋಸಿಯೇಶನ್ ಅಧ್ಯಕ್ಷ ಡಿ.ಎಂ.ಅಸ್ಲಂ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮನಪಾ ಸದಸ್ಯ ಅಬ್ದುಲ್ ರವೂಫ್, ಶಂಸುದ್ದೀನ್ ಬಂದರ್, ಕ್ರೀಡೋದ್ಯಮಿ ಶರೀಫ್, ಯು.ಆರ್. ಅಕಾಡೆಮಿ ಸ್ಥಾಪಕಾಧ್ಯಕ್ಷ ಉಮೇಶ್ ಉಚ್ಚಿಲ್, ಯೆನಪೋಯ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಸುಜಿತ್ ಕೆ.ವಿ.ಅಸೋಸಿಯೇಶನ್ ಉಪಾಧ್ಯಕ್ಷ ಬಿ.ಬಿ.ಥೋಮಸ್, ಕಾರ್ಯದರ್ಶಿ ಹುಸೈನ್ ಬೋಳಾರ್, ಖಜಾಂಚಿ ಫಿರೋಜ್ ಉಳ್ಳಾಲ್, ಸದಸ್ಯ ಅಬ್ದುಲ್ ಲತೀಫ್ ಬೆಂಗರೆ ಮೊದಲಾದವರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಡ್ರಗ್ಸ್ ವಿರುದ್ಧ ಯುವ ಸಮೂಹ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಥಾ ನಡೆಯಿತು. ನೆಹರೂ ಮೈದಾನದಿಂದ ಆರಂಭವಾಗಿ ಎ.ಬಿ.ಶೆಟ್ಟಿ ವೃತ್ತ, ಹ್ಯಾಮಿಲ್ಟನ್ ರಾವ್ ಆಂಡ್ ರಾವ್ ಸರ್ಕಲ್, ಲೇಡಿಗೋಷನ್, ಕ್ಲಾಕ್ ಟವರ್ ಮೂಲಕವಾಗಿ ನೆಹರೂ ಮೈದಾನದ ವರೆಗೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು