9:53 PM Sunday20 - July 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ…

ಇತ್ತೀಚಿನ ಸುದ್ದಿ

26.58 ಕೋಟಿ ರೂ.ವೆಚ್ಚದಲ್ಲಿ 6 ಗ್ರಾಮಗಳಿಗೆ  ಬಹು ಗ್ರಾಮ ಕುಡಿಯುವ ನೀರಿನ ಯೋಜನೆ: ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ

01/10/2022, 18:40

ಮಂಗಳೂರು(reporterkarnataka.com):ಸರಕಾರದ ಜಲಜೀವನ್ ಮಿಷನ್ ವತಿಯಿಂದ ಅಡ್ಯಾರ್ ,ಅರ್ಕುಳ, ಮಲ್ಲೂರು, ಬೊಂಡಂತಿಲ, ಉಳಾಯಿಬೆಟ್ಟು ಹಾಗೂ ನೀರುಮಾರ್ಗ ಗ್ರಾಮ ಪಂಚಾಯತ್ ಗಳಿಗೆ ಬಹುಗ್ರಾಮ ಶುದ್ದ ಕುಡಿಯುವ ನೀರಿನ ಯೋಜನೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ

ಡಾ.ಭರತ್ ಶೆಟ್ಟಿ ವೈ. ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಜಲಜೀವನ ಮಿಷನ್ ಯೋಜನೆಯಡಿ 6 ಗ್ರಾಮಗಳಿಗೆ ಪೈಪ್ ಲೈನ್ ಹಾಕುವ ಯೋಜನೆ, ಸಮೀಪದಲ್ಲಿ ಬೋರ್ ವೆಲ್ ತೋಡುವ ಮೂಲಕ ನೀರಿನ ಸಂಪರ್ಕ ನೀಡಲಾಗುವುದು. ನೀರಿನ ಮೂಲ ನಿರಂತರವಾಗಿ ಇರುವಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.

ಒಟ್ಟು 140 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಉತ್ತರ, ಮೂಡಬಿದ್ರೆ, ಬಂಟ್ವಾಳ, ಮಂಗಳೂರು,ಕ್ಷೇತ್ರ ವ್ಯಾಪ್ತಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡುವ ಕಾಮಗಾರಿ ಶೀಘ್ರ ಆರಂಭವಾಗಲಿದೆ ಎಂದರು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ 41 ಸಾವಿರ ಮನೆಗಳಿಗೆ ನೀರಿನ ಸಂಪರ್ಕ ಇದಾಗಿದೆ.

ಪಂಚಾಯತ್ ನೀರಿನ ಸಂಪರ್ಕ ನೀಡುವ ಜವಾಬ್ದಾರಿ ಹೊಂದಿದೆ ಎಂದು ತಿಳಿಸಿದರು.


ವೇದಿಕೆಯಲ್ಲಿ ಪಿಡಿಒ ಜೀನತ್ ಅಡ್ಯಾರ್, ದಮಯಂತಿ ನೀರುಮಾರ್ಗ, ಮನಪಾ ಸದಸ್ಯರಾದ ಹೇಮಲತಾ ರಘು ಸಾಲ್ಯಾನ್ಸ್, ಇಸ್ಮಾಯಿಲ್ ಮಲ್ಲೂರು, ರತ್ನಾ ಸುರೇಶ್, ಉಳಾಯಿಬೆಟ್ಟು ಪಿಡಿಒ ಅನಿತಾ ವಿ.ಕ್ಯಾತರಿನ್,ಪಿಡಿಒ ರಾಜೇಂದ್ರ, ನರೇಂದ್ರ ಬಾಬು, ನೀರು ಸರಬರಾಜಿನ ಎಂಜಿನಿಯರ್, ಜಿ ಕೆ ನಾಯಕ್ ನರೇಂದ್ರ,  ಜಗದೀಶ್ ಎಂಜಿನಿಯರ್ ಸುಧಾಕರ ಶೆಟ್ಟಿ, ಕಿಶೋರ್,ರಾಜೇಶ್ ಶೆಟ್ಟಿ‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು