12:20 AM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

26.58 ಕೋಟಿ ರೂ.ವೆಚ್ಚದಲ್ಲಿ 6 ಗ್ರಾಮಗಳಿಗೆ  ಬಹು ಗ್ರಾಮ ಕುಡಿಯುವ ನೀರಿನ ಯೋಜನೆ: ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ

01/10/2022, 18:40

ಮಂಗಳೂರು(reporterkarnataka.com):ಸರಕಾರದ ಜಲಜೀವನ್ ಮಿಷನ್ ವತಿಯಿಂದ ಅಡ್ಯಾರ್ ,ಅರ್ಕುಳ, ಮಲ್ಲೂರು, ಬೊಂಡಂತಿಲ, ಉಳಾಯಿಬೆಟ್ಟು ಹಾಗೂ ನೀರುಮಾರ್ಗ ಗ್ರಾಮ ಪಂಚಾಯತ್ ಗಳಿಗೆ ಬಹುಗ್ರಾಮ ಶುದ್ದ ಕುಡಿಯುವ ನೀರಿನ ಯೋಜನೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ

ಡಾ.ಭರತ್ ಶೆಟ್ಟಿ ವೈ. ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಜಲಜೀವನ ಮಿಷನ್ ಯೋಜನೆಯಡಿ 6 ಗ್ರಾಮಗಳಿಗೆ ಪೈಪ್ ಲೈನ್ ಹಾಕುವ ಯೋಜನೆ, ಸಮೀಪದಲ್ಲಿ ಬೋರ್ ವೆಲ್ ತೋಡುವ ಮೂಲಕ ನೀರಿನ ಸಂಪರ್ಕ ನೀಡಲಾಗುವುದು. ನೀರಿನ ಮೂಲ ನಿರಂತರವಾಗಿ ಇರುವಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.

ಒಟ್ಟು 140 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಉತ್ತರ, ಮೂಡಬಿದ್ರೆ, ಬಂಟ್ವಾಳ, ಮಂಗಳೂರು,ಕ್ಷೇತ್ರ ವ್ಯಾಪ್ತಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡುವ ಕಾಮಗಾರಿ ಶೀಘ್ರ ಆರಂಭವಾಗಲಿದೆ ಎಂದರು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ 41 ಸಾವಿರ ಮನೆಗಳಿಗೆ ನೀರಿನ ಸಂಪರ್ಕ ಇದಾಗಿದೆ.

ಪಂಚಾಯತ್ ನೀರಿನ ಸಂಪರ್ಕ ನೀಡುವ ಜವಾಬ್ದಾರಿ ಹೊಂದಿದೆ ಎಂದು ತಿಳಿಸಿದರು.


ವೇದಿಕೆಯಲ್ಲಿ ಪಿಡಿಒ ಜೀನತ್ ಅಡ್ಯಾರ್, ದಮಯಂತಿ ನೀರುಮಾರ್ಗ, ಮನಪಾ ಸದಸ್ಯರಾದ ಹೇಮಲತಾ ರಘು ಸಾಲ್ಯಾನ್ಸ್, ಇಸ್ಮಾಯಿಲ್ ಮಲ್ಲೂರು, ರತ್ನಾ ಸುರೇಶ್, ಉಳಾಯಿಬೆಟ್ಟು ಪಿಡಿಒ ಅನಿತಾ ವಿ.ಕ್ಯಾತರಿನ್,ಪಿಡಿಒ ರಾಜೇಂದ್ರ, ನರೇಂದ್ರ ಬಾಬು, ನೀರು ಸರಬರಾಜಿನ ಎಂಜಿನಿಯರ್, ಜಿ ಕೆ ನಾಯಕ್ ನರೇಂದ್ರ,  ಜಗದೀಶ್ ಎಂಜಿನಿಯರ್ ಸುಧಾಕರ ಶೆಟ್ಟಿ, ಕಿಶೋರ್,ರಾಜೇಶ್ ಶೆಟ್ಟಿ‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು