6:53 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

26.58 ಕೋಟಿ ರೂ.ವೆಚ್ಚದಲ್ಲಿ 6 ಗ್ರಾಮಗಳಿಗೆ  ಬಹು ಗ್ರಾಮ ಕುಡಿಯುವ ನೀರಿನ ಯೋಜನೆ: ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ

01/10/2022, 18:40

ಮಂಗಳೂರು(reporterkarnataka.com):ಸರಕಾರದ ಜಲಜೀವನ್ ಮಿಷನ್ ವತಿಯಿಂದ ಅಡ್ಯಾರ್ ,ಅರ್ಕುಳ, ಮಲ್ಲೂರು, ಬೊಂಡಂತಿಲ, ಉಳಾಯಿಬೆಟ್ಟು ಹಾಗೂ ನೀರುಮಾರ್ಗ ಗ್ರಾಮ ಪಂಚಾಯತ್ ಗಳಿಗೆ ಬಹುಗ್ರಾಮ ಶುದ್ದ ಕುಡಿಯುವ ನೀರಿನ ಯೋಜನೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ

ಡಾ.ಭರತ್ ಶೆಟ್ಟಿ ವೈ. ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಜಲಜೀವನ ಮಿಷನ್ ಯೋಜನೆಯಡಿ 6 ಗ್ರಾಮಗಳಿಗೆ ಪೈಪ್ ಲೈನ್ ಹಾಕುವ ಯೋಜನೆ, ಸಮೀಪದಲ್ಲಿ ಬೋರ್ ವೆಲ್ ತೋಡುವ ಮೂಲಕ ನೀರಿನ ಸಂಪರ್ಕ ನೀಡಲಾಗುವುದು. ನೀರಿನ ಮೂಲ ನಿರಂತರವಾಗಿ ಇರುವಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.

ಒಟ್ಟು 140 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಉತ್ತರ, ಮೂಡಬಿದ್ರೆ, ಬಂಟ್ವಾಳ, ಮಂಗಳೂರು,ಕ್ಷೇತ್ರ ವ್ಯಾಪ್ತಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡುವ ಕಾಮಗಾರಿ ಶೀಘ್ರ ಆರಂಭವಾಗಲಿದೆ ಎಂದರು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ 41 ಸಾವಿರ ಮನೆಗಳಿಗೆ ನೀರಿನ ಸಂಪರ್ಕ ಇದಾಗಿದೆ.

ಪಂಚಾಯತ್ ನೀರಿನ ಸಂಪರ್ಕ ನೀಡುವ ಜವಾಬ್ದಾರಿ ಹೊಂದಿದೆ ಎಂದು ತಿಳಿಸಿದರು.


ವೇದಿಕೆಯಲ್ಲಿ ಪಿಡಿಒ ಜೀನತ್ ಅಡ್ಯಾರ್, ದಮಯಂತಿ ನೀರುಮಾರ್ಗ, ಮನಪಾ ಸದಸ್ಯರಾದ ಹೇಮಲತಾ ರಘು ಸಾಲ್ಯಾನ್ಸ್, ಇಸ್ಮಾಯಿಲ್ ಮಲ್ಲೂರು, ರತ್ನಾ ಸುರೇಶ್, ಉಳಾಯಿಬೆಟ್ಟು ಪಿಡಿಒ ಅನಿತಾ ವಿ.ಕ್ಯಾತರಿನ್,ಪಿಡಿಒ ರಾಜೇಂದ್ರ, ನರೇಂದ್ರ ಬಾಬು, ನೀರು ಸರಬರಾಜಿನ ಎಂಜಿನಿಯರ್, ಜಿ ಕೆ ನಾಯಕ್ ನರೇಂದ್ರ,  ಜಗದೀಶ್ ಎಂಜಿನಿಯರ್ ಸುಧಾಕರ ಶೆಟ್ಟಿ, ಕಿಶೋರ್,ರಾಜೇಶ್ ಶೆಟ್ಟಿ‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು