12:51 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

27ರಿಂದ 29ರ ವರೆಗೆ ಪಣಂಬೂರು ಬೀಚ್ ನಲ್ಲಿ ಸರ್ಫಿಂಗ್: ಅಗತ್ಯ ಮುನ್ನೆಚ್ಚರಿಕಾ ಕ್ರಮಗಳಿಗೆ ಜಿಲ್ಲಾಧಿಕಾರಿ ಸೂಚನೆ

24/05/2022, 22:31

ಮಂಗಳೂರು(reporterkarnataka.com): ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ಇದೇ ಮೇ 27ರಿಂದ 29ರವರೆಗೆ ಪಣಂಬೂರು ಕಡಲತಡಿಯಲ್ಲಿ ಸರ್ಫಿಂಗ್ ಕ್ರೀಡೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನ್ಯಾಷನಲ್  ಸರ್ಫಿಂಗ್ ಫೆಸ್ಟಿವಲ್ 2022 ಕುರಿಂತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ಅಪಾಯಗಳು, ಅವಘಡಗಳು ಸಂಭವಿಸದಂತೆ ಕಟ್ಟುನಿಟ್ಟಿನ ಮುನ್ನೇಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಸಮುದ್ರದ ಅಲೆಗಳ ಮೇಲೆ ಆಡುವ ಸರ್ಫಿಂಗ್ ಕ್ರೀಡೆಯಲ್ಲಿ ಹೆಚ್ಚಿನ ಜಾಗ್ರತೆ ಅವಶ್ಯ, ಆದಕಾರಣ ಲೈಫ್ ಗಾರ್ಡ್ ಗಳು,ಆಂಬುಲೆನ್ಸ್, ಮೆಡಿಕಲ್ ಪರಿಕರವಿರುವ ವಾಹನ, ಜೀವರಕ್ಷಕ ಸಾಧನಗಳು, ದೋಣಿಗಳು ಸೇರಿದಂತೆ ಅಪಾಯದಿಂದ ರಕ್ಷಿಸುವ ಕಾರ್ಯಾಚರಣೆ ಸಾಧನಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು ಎಂದರು.

ಎನ್ಎಂಪಿಟಿ, ಕರಾವಳಿ ಕಾವಲು ಪಡೆ ಹಾಗೂ ಪೊಲೀಸ್ ಸಿಬ್ಬಂದಿಗಳು ಅವಘಡಗಳು ಆಗದಂತೆ ಎಚ್ಚರ ವಹಿಸಬೇಕು.

ಸರ್ಫಿಂಗ್ ಯಶಸ್ವಿಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಲಾಗುವುದು, ಈ ಸಾಹಸ ಕ್ರೀಡೆಗಳು ಸಾರ್ವಜನಿಕರಲ್ಲಿ ಆಸಕ್ತಿ ಮೂಡಿಸಬೇಕು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು, ಅದಕ್ಕಾಗಿ ಸಮೂಹ ಹಾಗೂ ಸಾಮಾಜಿಕ ಮಾದ್ಯಮಗಳಲ್ಲಿ ಹೆಚ್ಚಿನ ಪ್ರಚಾರ ಕಾರ್ಯವನ್ನು ಮಾಡಬೇಕು, ಮುಖ್ಯವಾಗಿ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸುವಂತೆ ತಿಳಿಸಿದರು.

ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಾಣಿಕ್ಯ, ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾದ ಉಪಾಧ್ಯಕ್ಷ ರಾಮ್ ಮೋಹನ್, ಸರ್ಫಿಂಗ್  ಫೆಡರೇಷನ್  ಆಫ್ ಇಂಡಿಯಾದ ಜಂಟಿ ಕಾರ್ಯದರ್ಶಿ ಗೌರವ ಹೆಗ್ಡೆ,  ಎನ್ ಎಂ ಪಿ ಟಿಯ ಸಿವಿಲ್  ಇಂಜಿನಿಯರ್ ಶಶಿಧರ್ ಸೇರಿದಂತೆ ಸಂಬಂಧಿಸಿದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು