8:48 PM Friday20 - June 2025
ಬ್ರೇಕಿಂಗ್ ನ್ಯೂಸ್
Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

27ನೇ ಬ್ರಹ್ಮೋತ್ಸವ: ನಂಜನಗೂಡು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ವತಿಯಿಂದ ಬೃಹತ್ ಪಾದಯಾತ್ರೆ

26/12/2024, 17:41

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಪವಿತ್ರ ಯಾತ್ರಾಸ್ಥಳವಾದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ವತಿಯಿಂದ ಇಂದು ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.


ಹತ್ತು ದಿನಗಳ ಕಾಲ ನಡೆಯುತ್ತಿರುವ 27ನೇ ಬ್ರಹ್ಮೋತ್ಸವದ ಅಂಗವಾಗಿ ಇಂದು ಮೈಸೂರಿನ ಶ್ರೀ ದತ್ತ ವೆಂಕಟರಮ ಸ್ವಾಮಿ ದೇವಾಲಯದಿಂದ ನಂಜನಗೂಡಿನ ಶ್ರೀ ಅಯ್ಯಪ್ಪ ಸ್ವಾಮಿ ದೇಗುಲದ ವರೆಗೆ ಇರುಮುಡಿ ಹೊತ್ತ ನೂರಾರು ಅಯ್ಯಪ್ಪ ಭಕ್ತರು ಪಾದಯಾತ್ರೆ ನಡೆಸುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಮಂಗಳವಾರ ರಾತ್ರಿ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಸುಮಾರು 200ಕ್ಕೂ ಹೆಚ್ಚು ಅಯ್ಯಪ್ಪ ಭಕ್ತರು ಇರುಮುಡಿ ಕಟ್ಟಿಸಿಕೊಂಡು ರಾತ್ರಿ ಮೈಸೂರಿನ ದತ್ತ ವೆಂಕಟರಮಣಸ್ವಾಮಿ ದೇವಾಲಯಕ್ಕೆ ವಾಹನದಲ್ಲಿ ತೆರಳಿ ವಾಸ್ತವ್ಯ ಹೂಡಿದ್ದರು.
ಇಂದು ಬೆಳಗಿನ ಜಾವ 4 ಗಂಟೆಗೆ ಅಲ್ಲಿಂದ ಮೈಸೂರು ಊಟಿ ಹೆದ್ದಾರಿಯಲ್ಲಿ ಸುಮಾರು 25 ಕಿಮಿ ದೂರ ಬರಿಗಾಲಲ್ಲಿ ಪಾದಯಾತ್ರೆ ನಡೆಸಿ ನಂಜನಗೂಡಿನ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ತಲುಪಿದ್ದಾರೆ. ದೇವಾಲಯ ತಲುಪಿದ ಭಕ್ತರು ಅಯ್ಯಪ್ಪನ ನಾಮಸ್ಮರಣೆ ಮಾಡುತ್ತಾ ಪವಿತ್ರ 18 ಮೆಟ್ಟಿಲುಗಳ ಬಳಿ ಕರ್ಪೂರ ಹಚ್ಚಿ ಈಡುಗಾಯಿ ಒಡೆದು ಪವಿತ್ರ ಮೆಟ್ಟಿಲುಗಳನ್ನು ಹತ್ತುವ ಮೂಲಕ ದೇವಾಲಯ ಪ್ರವೇಶಿಸಿ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಭಕ್ತಿ ಭಾವ ಮೆರೆದರು.
ಇದಕ್ಕೂ ಮುನ್ನ ಪಾದಯಾತ್ರೆಯಲ್ಲಿ ಬಂದ ಎಲ್ಲಾ ಭಕ್ತರಿಗೆ ದಾನಿಗಳಿಂದ ಸುಕ್ಷೇತ್ರ ಶ್ರೀ ಮಲ್ಲನ ಮೂಲೆ ಮಠದ ದಾಸೋಹ ಭವನದಲ್ಲಿ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿತ್ತು.ಅಲ್ಲದೆ ದಾರಿ ಉದ್ದಕ್ಕೂ ಅಲ್ಲಲ್ಲಿ ಕೆಲವು ದಾನಿಗಳು ಹಾಗೂ ಭಕ್ತರು ಪಾದ ಯಾತ್ರೆಯಲ್ಲಿ ಬಂದ ಗುರುಸ್ವಾಮಿಗಳಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿ ಬಂದ ಎಲ್ಲ ಭಕ್ತರಿಗೆ ಕಾಫಿ, ಟೀ, ಬಿಸ್ಕೆಟ್,ನೀರು, ತಂಪು ಪಾನಿಯ ನೀಡಿ ಸತ್ಕರಿ ಸುತ್ತಿದ್ದದ್ದು ವಿಶೇಷವಾಗಿತ್ತು
ಪಾದಯಾತ್ರೆಯಲ್ಲಿ ಮಕ್ಕಳು, ಮಹಿಳೆಯರು, ಯುವಕರು, ವಯೋ ವೃದ್ಧರಾಧಿಯಾಗಿ ಪಾಲ್ಗೊಂಡು ಸುಮಾರು 25 ಕಿಮೀ ಕ್ರಮಿಸಿ ತಮ್ಮ ಭಕ್ತಿ ಭಾವ ಸಮರ್ಪಿಸಿದ್ದಾರೆ
ದೇವಾಲಯಕ್ಕೆ ಬಂದ ಎಲ್ಲಾ ಭಕ್ತರಿಗೆ ದಾನಿಗಳು ಹಾಗೂ ದೇವಾಲಯದ ವತಿಯಿಂದ ಅನ್ನಸಂತರ್ಪಣೆ ಮಾಡಲಾಯಿತು.
ನಂತರ ಗುರುಸ್ವಾಮಿಗಳಾದ ಶ್ರೀ ದೇವರಾಜ ಸ್ವಾಮಿಗಳು ಮಾತನಾಡಿ ಶ್ರೀ ಕ್ಷೇತ್ರ ಶಬರಿಮಲೆ ಕ್ಷೇತ್ರಕ್ಕೆ ಹೋಗಲಾಗದ ಎಷ್ಟೋ ಭಕ್ತರು ಇಲ್ಲೇ ಇರುಮುಡಿ ಕಟ್ಟಿಸಿಕೊಂಡು ಮೈಸೂರಿನಿಂದ ಪಾದಯಾತ್ರೆ ನಡೆಸಿ ಬಂದು ದೇವರ ದರ್ಶನ ಪಡೆಯುತ್ತಾರೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು