2:18 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

27ನೇ ಬ್ರಹ್ಮೋತ್ಸವ: ನಂಜನಗೂಡು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ವತಿಯಿಂದ ಬೃಹತ್ ಪಾದಯಾತ್ರೆ

26/12/2024, 17:41

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಪವಿತ್ರ ಯಾತ್ರಾಸ್ಥಳವಾದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ವತಿಯಿಂದ ಇಂದು ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.


ಹತ್ತು ದಿನಗಳ ಕಾಲ ನಡೆಯುತ್ತಿರುವ 27ನೇ ಬ್ರಹ್ಮೋತ್ಸವದ ಅಂಗವಾಗಿ ಇಂದು ಮೈಸೂರಿನ ಶ್ರೀ ದತ್ತ ವೆಂಕಟರಮ ಸ್ವಾಮಿ ದೇವಾಲಯದಿಂದ ನಂಜನಗೂಡಿನ ಶ್ರೀ ಅಯ್ಯಪ್ಪ ಸ್ವಾಮಿ ದೇಗುಲದ ವರೆಗೆ ಇರುಮುಡಿ ಹೊತ್ತ ನೂರಾರು ಅಯ್ಯಪ್ಪ ಭಕ್ತರು ಪಾದಯಾತ್ರೆ ನಡೆಸುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಮಂಗಳವಾರ ರಾತ್ರಿ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಸುಮಾರು 200ಕ್ಕೂ ಹೆಚ್ಚು ಅಯ್ಯಪ್ಪ ಭಕ್ತರು ಇರುಮುಡಿ ಕಟ್ಟಿಸಿಕೊಂಡು ರಾತ್ರಿ ಮೈಸೂರಿನ ದತ್ತ ವೆಂಕಟರಮಣಸ್ವಾಮಿ ದೇವಾಲಯಕ್ಕೆ ವಾಹನದಲ್ಲಿ ತೆರಳಿ ವಾಸ್ತವ್ಯ ಹೂಡಿದ್ದರು.
ಇಂದು ಬೆಳಗಿನ ಜಾವ 4 ಗಂಟೆಗೆ ಅಲ್ಲಿಂದ ಮೈಸೂರು ಊಟಿ ಹೆದ್ದಾರಿಯಲ್ಲಿ ಸುಮಾರು 25 ಕಿಮಿ ದೂರ ಬರಿಗಾಲಲ್ಲಿ ಪಾದಯಾತ್ರೆ ನಡೆಸಿ ನಂಜನಗೂಡಿನ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ತಲುಪಿದ್ದಾರೆ. ದೇವಾಲಯ ತಲುಪಿದ ಭಕ್ತರು ಅಯ್ಯಪ್ಪನ ನಾಮಸ್ಮರಣೆ ಮಾಡುತ್ತಾ ಪವಿತ್ರ 18 ಮೆಟ್ಟಿಲುಗಳ ಬಳಿ ಕರ್ಪೂರ ಹಚ್ಚಿ ಈಡುಗಾಯಿ ಒಡೆದು ಪವಿತ್ರ ಮೆಟ್ಟಿಲುಗಳನ್ನು ಹತ್ತುವ ಮೂಲಕ ದೇವಾಲಯ ಪ್ರವೇಶಿಸಿ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಭಕ್ತಿ ಭಾವ ಮೆರೆದರು.
ಇದಕ್ಕೂ ಮುನ್ನ ಪಾದಯಾತ್ರೆಯಲ್ಲಿ ಬಂದ ಎಲ್ಲಾ ಭಕ್ತರಿಗೆ ದಾನಿಗಳಿಂದ ಸುಕ್ಷೇತ್ರ ಶ್ರೀ ಮಲ್ಲನ ಮೂಲೆ ಮಠದ ದಾಸೋಹ ಭವನದಲ್ಲಿ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿತ್ತು.ಅಲ್ಲದೆ ದಾರಿ ಉದ್ದಕ್ಕೂ ಅಲ್ಲಲ್ಲಿ ಕೆಲವು ದಾನಿಗಳು ಹಾಗೂ ಭಕ್ತರು ಪಾದ ಯಾತ್ರೆಯಲ್ಲಿ ಬಂದ ಗುರುಸ್ವಾಮಿಗಳಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿ ಬಂದ ಎಲ್ಲ ಭಕ್ತರಿಗೆ ಕಾಫಿ, ಟೀ, ಬಿಸ್ಕೆಟ್,ನೀರು, ತಂಪು ಪಾನಿಯ ನೀಡಿ ಸತ್ಕರಿ ಸುತ್ತಿದ್ದದ್ದು ವಿಶೇಷವಾಗಿತ್ತು
ಪಾದಯಾತ್ರೆಯಲ್ಲಿ ಮಕ್ಕಳು, ಮಹಿಳೆಯರು, ಯುವಕರು, ವಯೋ ವೃದ್ಧರಾಧಿಯಾಗಿ ಪಾಲ್ಗೊಂಡು ಸುಮಾರು 25 ಕಿಮೀ ಕ್ರಮಿಸಿ ತಮ್ಮ ಭಕ್ತಿ ಭಾವ ಸಮರ್ಪಿಸಿದ್ದಾರೆ
ದೇವಾಲಯಕ್ಕೆ ಬಂದ ಎಲ್ಲಾ ಭಕ್ತರಿಗೆ ದಾನಿಗಳು ಹಾಗೂ ದೇವಾಲಯದ ವತಿಯಿಂದ ಅನ್ನಸಂತರ್ಪಣೆ ಮಾಡಲಾಯಿತು.
ನಂತರ ಗುರುಸ್ವಾಮಿಗಳಾದ ಶ್ರೀ ದೇವರಾಜ ಸ್ವಾಮಿಗಳು ಮಾತನಾಡಿ ಶ್ರೀ ಕ್ಷೇತ್ರ ಶಬರಿಮಲೆ ಕ್ಷೇತ್ರಕ್ಕೆ ಹೋಗಲಾಗದ ಎಷ್ಟೋ ಭಕ್ತರು ಇಲ್ಲೇ ಇರುಮುಡಿ ಕಟ್ಟಿಸಿಕೊಂಡು ಮೈಸೂರಿನಿಂದ ಪಾದಯಾತ್ರೆ ನಡೆಸಿ ಬಂದು ದೇವರ ದರ್ಶನ ಪಡೆಯುತ್ತಾರೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು