1:35 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಕಡೂರು ಸಮೀಪ 3 ಕೃಷ್ಣ ಮೃಗಗಳ ಗುಂಡಿಕ್ಕಿ ಹತ್ಯೆ: ದುಷ್ಕರ್ಮಿಗಳ ಬಚಾವ್ ಮಾಡಲು ಅರಣ್ಯ ಇಲಾಖೆ ಯತ್ನ?

24/12/2025, 15:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತೀರಾ ಅಳಿವಿನಂಚಿನಲ್ಲಿರುವ ಅಪರೂಪದ ಪ್ರಾಣಿ
ಕೃಷ್ಣ ಮೃಗಗಳಿಗೆ ಬೇಟೆಗಾರರು ಗುಂಡಿಕ್ಕಿ ಹತ್ಯೆಗೈದ ಘಟನರ
ಕಡೂರು ತಾಲೂಕಿನ ಬಾಸೂರು ಕಾವಲ್ ನಲ್ಲಿ ನಡೆದಿದೆ.
ಬಾಸೂರು ಕೃಷ್ಣಮೃಗಗಳ ಸಂರಕ್ಷಿತ ಪ್ರದೇಶದ ಪಕ್ಕದ ಜಮೀನಿನಲ್ಲಿ ಈ ಕೃತ್ಯ ಎಸಗಲಾಗಿದೆ. 2 ಹೆಣ್ಣು ಹಾಗೂ 1 ಗಂಡು ಕೃಷ್ಣಮೃಗಗಳನ್ನು ಗುಂಡಿಕ್ಕಿ ಸಾಯಿಸಲಾಗಿದೆ.
ಮೂರು ಕೃಷ್ಣಮೃಗಗಳಿಗೂ ಸುಮಾರು 2 ವರ್ಷ ಪ್ರಾಯ ಎಂದು ಅಂದಾಜಿಸಲಾಗಿದೆ.
ರಾಜ್ಯದಲ್ಲಿ ಹಾವೇರಿ ಮತ್ತು ಚಿಕ್ಕಮಗಳೂರಿನಲ್ಲಿ ಮಾತ್ರ ಕೃಷ್ಣಮೃಗ ಕಾಣಸಿಗುತ್ತದೆ.


ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಂದ ಶೂಟ್ ಮಾಡಲಾಗಿದೆ. ಪ್ರಕರಣ ಮುಚ್ಚಿ ಹಾಕಲು ಅರಣ್ಯ ಇಲಾಖೆ ಯತ್ನಿಸಿದೆ ಎಂಬ ಆರೋಪ ಕೇಳಿ ಬಂದಿದೆ.
ಪ್ರಕರಣ ಮುಚ್ಚಿ ಹಾಕಲು ಸಂಜೆಯೇ ಕೃಷ್ಣಮೃಗಗಳನ್ನ ಅಂತ್ಯ ಸಂಸ್ಕಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಸಂಜೆ ಬಳಿಕ ಅವಸರದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗಿದೆ. ಸಂಜೆ ಬಳಿಕ ಪ್ರಾಣಿಗಳ ಶವಪರೀಕ್ಷೆ-ಅಂತ್ಯ ಸಂಸ್ಕಾರ ಮಾಡುವಂತಿಲ್ಲ.
ಅಪರಾಧಿಗಳ ರಕ್ಷಣೆಗೆ ಆತುರದಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದಾರೆಂದು ಆರೋಪ ಎದುರಾಗಿದೆ.
ಬೀರೂರು ವಲಯ ಅರಣ್ಯ ಅಧಿಕಾರಿಗಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು