12:16 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

3 ಘಾಟ್ ಗಳಲ್ಲಿ ಸಂಚಾರ ನಿಷೇಧ: ಜಿಲ್ಲಾಧಿಕಾರಿಗಳ ಸಮನ್ವಯತೆ ಕೊರತೆ ಬಗ್ಗೆ ಪಿಡಬ್ಲ್ಯೂಡಿ ಪ್ರಧಾನ ಕಾರ್ಯದರ್ಶಿಗೆ ಸ್ಪೀಕರ್ ಖಾದರ್ ಸೂಚನೆ

19/07/2024, 21:59

ಬೆಂಗಳೂರು(reporterkarnataka.com): ಮಂಗಳೂರು-ಬೆಂಗಳೂರು ಸಂಪರ್ಕಿಸುವ ಪ್ರಮುಖ ಮೂರು ಘಾಟ್ ಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್ ಗಳನ್ನು ಬಂದ್ ಮಾಡುವುದರಲ್ಲಿ ಸಮನ್ವಯತೆಯ ಕೊರತೆ ಕಂಡುಬರುತ್ತಿದೆ. ಕಳೆದ ರಾತ್ರಿ ಮಡಿಕೇರಿ ಘಾಟ್ ನಲ್ಲಿ ನೂರಾರು ಜನರು ಅತಂತ್ರರಾಗಿದ್ದರು. ಇದು ಉಭಯ ಜಿಲ್ಲೆಗಳ ಜಿಲ್ಲಾಡಳಿತದ ಪೂರ್ವ ಸಿದ್ಧತೆಯ ಕೊರತೆಯಾಗಿದೆ. ಈ ಬಗ್ಗೆ ಇಂದು ಸ್ಪೀಕರ್ ಯು.ಟಿ.ಖಾದರ್ ಲೋಕೋಪಯೋಗಿ ಇಲಾಖೆಯ ಪ್ರದಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಅವರಿಗೆ ಸೂಕ್ತ ಸೂಚನೆಯನ್ನು ನೀಡಿದ್ದಾರೆ.
ಮಂಗಳೂರು, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪರಸ್ಪರ ಮಾತುಕತೆ ನಡೆಸಿ ಪೂರ್ವಸಿದ್ಧತೆಯೊಂದಿಗೆ ಘಾಟ್ ಬಂದ್ ಬಗ್ಗೆ ಚಿಂತಿಸಬೇಕು. ಒಂದೊಂದು ಜಿಲ್ಲೆ ತೀರ್ಮಾನ ತೆಗೆದುಕೊಂಡರೆ ಜನರಿಗೆ ಸಮಸ್ಯೆಯಾಗುತ್ತದೆ. ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ರಾತ್ರಿ 8ರಿಂದ ಬೆಳಿಗ್ಗೆ 6ರ ತನಕ ರಸ್ತೆ ನಿರ್ಬಂಧ ಮಾಡಬೇಕು. ಲೋಕೋಪಯೋಗಿ ಇಲಾಖೆ ರಸ್ತೆ ಸುರಕ್ಷತೆಗೆ ಪ್ರಾಮುಖ್ಯತೆ ಕೊಟ್ಟು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೆಲ್ವಕುಮಾರ್ ಅವರಿಗೆ ಯು.ಟಿ.ಖಾದರ್ ಸೂಚಿಸಿದ್ದಾರೆ.
ದಿನನಿತ್ಯ ಸಹಸ್ರಾರು ಮಂದಿ ಮಂಗಳೂರು-ಬೆಂಗಳೂರು ಪ್ರಯಾಣಿಸುತ್ತಾರೆ. ಪ್ರಯಾಣಿಕರು ಬಸ್, ಕಾರುಗಳನ್ನು ಆಶ್ರಯಿಸುತ್ತಾರೆ. ನಿತ್ಯಬಳಕೆಯ ವಸ್ತುಗಳ ಟ್ರಕ್ ಗಳೂ ಸಂಚರಿಸುತ್ತವೆ. ಆದರೆ ಈ ಪ್ರಮುಖ ಮೂರೂ ಘಾಟ್ ರಸ್ತೆಗಳನ್ನು ಬಂದ್ ಮಾಡಿದರೆ ಜನರು ಪರದಾಟ ನಡೆಸಬೇಕಾಗುತ್ತದೆ. ವಿಮಾನ ಸಂಚಾರ ಜನಸಾಮಾನ್ಯರ ಕೈಗೆಟಕದು. ರೈಲು ಸಂಚಾರ ತುರ್ತು ಸಂದರ್ಭಗಳಿಗೆ ಅನುಗುಣವಾಗಿಲ್ಲ. ಈ ನಿಟ್ಟಿನಲ್ಲಿ ರಸ್ತೆ ಸಂಚಾರ ಅನಿವಾರ್ಯವಾಗಿರುತ್ತದೆ. ಮಡಿಕೇರಿ ಘಾಟ್ ನಲ್ಲಿ ನಿನ್ನೆ ಆದಂತಹ ಸಮಸ್ಯೆ ಮರುಕಳಿಸದಂತೆ ವ್ಯವಸ್ಥೆ ಮಾಡಬೇಕಾದುದು ನಾಲ್ಕೂ ಜಿಲ್ಲಾಧಿಕಾರಿಗಳ ಹಾಗೂ ಲೋಕೋಪಯೋಗಿ ಇಲಾಖೆಯ ಕರ್ತವ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು