5:20 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಸೆಲ್ಫಿ ಕ್ರೇಜ್‌ಗೆ 3 ಬಾಲಕಿಯರು ಬಲಿ: ಜಲಪಾತದಲ್ಲಿ ಫೋಟೋ ತೆಗೆಯುವಾಗ ದುರಂತ

10/04/2026, 22:13

ಹೈದರಾಬಾದ್ (reporterkarnataka.com):ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ನೀರಿನಲ್ಲಿ ಈಜಾಡುತ್ತಿದ್ದಾಗಲೇ ಮೂವರು ಹದಿಹರೆಯದ ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಆಘಾತಕಾರಿ ವಿಚಾರವೆಂದರೆ ಇವರ ಕೊನೆಕ್ಷಣಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ನೀರಿನಲ್ಲಿ ಫೋಟೋ ತೆಗೆಯುವ ವೇಳೆಯೇ ಈ ದುರಂತ ಸಂಭವಿಸಿದೆ.

*ಬಾಲಕಿಯರ ಕೊನೆಕ್ಷಣ ಕ್ಯಾಮರಾದಲ್ಲಿ ಸೆರೆ*
ಇಲ್ಲಿನ ಹುಕುಂಪೇಟ ಮಂಡಲದ ಬುರ್ಜಾ ಪಂಚಾಯತ್‌ ಬಳಿಯ ಮುಲ್ಲುನ್ಗುಮ್ಮಿ ಎಂಬ ಜಲಪಾತದ ಬಳಿ ಈ ದುರಂತ ಸಂಭವಿಸಿದೆ. ರಜಾ ದಿನವಾಗಿದ್ದರಿಂದ ಜಂಬವಲಸಾ ಗ್ರಾಮದ ಐವರು ಹುಡುಗಿಯರು ಈ ಜಲಪಾತವನ್ನು ನೋಡುವುದಕ್ಕೆ ಆಗಮಿಸಿದ್ದರು. ಈ ಸಮಯದಲ್ಲಿ ನೀರಿನಲ್ಲಿ ಈಜಾಡುತ್ತಾ ಎಂಜಾಯ್ ಮಾಡುತ್ತಿದ್ದಾಗ ಫೋಟೋ ಕ್ಲಿಕ್ಕಿಸಲು ಮುಂದಾಗಿದ್ದು, ಇದೇ ವೇಳೆ ಈ ದುರಂತ ಸಂಭವಿಸಿದೆ.
ಪೊಲೀಸರ ಪ್ರಕಾರ, ಈ ಹುಡುಗಿಯರು ಸೇತುವೆಯ ಬಳಿಯೇ ಫೋಟೋ ಹಾಗೂ ಸೆಲ್ಫಿ ವೀಡಿಯೋ ಮಾಡಿದ್ದಾರೆ. ಬಳಿಕ ಐವರಲ್ಲಿ ಮೂವರು ಹುಡುಗಿಯರು ಜಲಪಾತದ ಮಧ್ಯೆ ಇರುವ ದೊಡ್ಡ ಬಂಡೆಯೊಂದನ್ನು ಏರಿದ್ದಾರೆ. ಇದೇ ವೇಳೆ ಅವರು ಅಲ್ಲಿಂದ ಆಯತಪ್ಪಿ ನೀರಿಗೆ ಬಿದ್ದಿದ್ದು, ನೀರಿನಲ್ಲಿ ಮುಳುಗಿ ಹೋಗಿದ್ದಾರೆ.
ಅಲ್ಲಿದ್ದ ಸ್ಥಳೀಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರಾದರೂ ನೀರಿನ ಹರಿವಿನ ರಭಸಕ್ಕೆ ಸಿಲುಕಿ ಬಾಲಕಿಯರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರ ಮೃತದೇಹಗಳನ್ನು ನಂತರ ನೀರಿನಿಂದ ಮೇಲೆತ್ತಲಾಗಿದೆ. ಹೀಗೆ ನೀರಿನಲ್ಲಿ ಮುಳುಗಿ ಪ್ರಾಣಬಿಟ್ಟ ಹರೆಯದ ಬಾಲಕಿಯರನ್ನು 17 ವರ್ಷದ ತ್ರಿಶಾ 16 ವರ್ಷದ ರತ್ನಕುಮಾರಿ, ಹಾಗೂ 16 ವರ್ಷದ ಪವಿತ್ರಾ ಎಂದು ಗುರುತಿಸಲಾಗಿದೆ. ಉಳಿದಿಬ್ಬರು ಬಾಲಕಿಯರು ಸುರಕ್ಷಿತವಾಗಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ. ಈ ಘಟನೆ ಈಗ ಸ್ಥಳೀಯರಲ್ಲಿ ತೀವ್ರ ಕಳವಳ ಮೂಡಿಸಿದೆ. ಘಟನೆ ನಡೆದ ಸ್ಥಳವು ಅಲ್ಲುರಿ ಜಿಲ್ಲೆಯಲ್ಲಿ ಬರುವ ಅತೀ ಸುಂದರವಾದ ಜಲಪಾತವಾಗಿದ್ದು, ಸುಂದರವಾದ ನೈಸರ್ಗಿಕ ದೃಶ್ಯಗಳಿಂದ ಗಮನ ಸೆಳೆಯುತ್ತಿದೆ. ಇಲ್ಲಿ ಈ ಹಿಂದೆಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದಂತಹ ಹಲವು ಘಟನೆಗಳು ನಡೆದಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು