3:54 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

3 ಕ್ಷೇತ್ರಗಳ ಉಪ ಚುನಾವಣೆಗೆ ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಶಕ್ತಿ ಇದೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

26/10/2024, 20:52

ಬೆಂಗಳೂರು(reporterkarnataka.com): ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಸೇರಿ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸುವ ಶಕ್ತಿ ಈ 3 ಕ್ಷೇತ್ರಗಳಿಗೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ನಡೆದ ಸಭೆಯ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಈ ಚುನಾವಣೆಯನ್ನು ನಾವು ಸವಾಲಾಗಿ ಸ್ವೀಕಾರ ಮಾಡಿದ್ದೇವೆ. ಶಿಗ್ಗಾವಿ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಗೆದ್ದಿರುವಂಥ ವಾತಾವರಣ ನಿರ್ಮಾಣವಾಗಿದೆ ಎಂದು ವಿಶ್ಲೇಷಿಸಿದರು.
ಸಂಡೂರಿನಲ್ಲೂ ಬಿಜೆಪಿ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿದ್ದೇವೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ- ಜೆಡಿಎಸ್ ಪಕ್ಷಗಳ ಕಾರ್ಯಕರ್ತರಲ್ಲಿ ರಣೋತ್ಸಾಹ ಇದೆ. ಚನ್ನಪಟ್ಟಣದಲ್ಲಿ ಎನ್‍ಡಿಎ ಗೆಲುವು ಸಾಧಿಸಲಿದೆ ಎಂದು ನುಡಿದರು.
ಚುನಾವಣೆಯಲ್ಲಿ ನಮ್ಮ ಪ್ರತಿಯೊಬ್ಬ ಕಾರ್ಯಕರ್ತರು ಹಗಲು- ರಾತ್ರಿ ಶ್ರಮವನ್ನು ಹಾಕಿ, ನಿಖಿಲ್ ಕುಮಾರಸ್ವಾಮಿ ಅವರು ದೊಡ್ಡ ಅಂತರದಲ್ಲಿ ಗೆಲ್ಲುವಂತೆ ಕಾರ್ಯತಂತ್ರ ರೂಪಿಸಲು ಸಭೆ ನಡೆಸಿದ್ದೇವೆ. ಎಲ್ಲರೂ ಹೆಚ್ಚಿನ ಉತ್ಸಾಹದಲ್ಲಿದ್ದಾರೆ. ನಮ್ಮ ಪ್ರತಿಯೊಬ್ಬ ಕಾರ್ಯಕರ್ತರು ಹಗಲು- ರಾತ್ರಿ ನಿಖಿಲ್ ಕುಮಾರಸ್ವಾಮಿ ಅವರ ಗೆಲುವಿಗೆ ಶ್ರಮಿಸುವ ಭರವಸೆ ಕೊಟ್ಟಿದ್ದೇವೆ ಎಂದರು.
ಇವತ್ತು ಬಿಜೆಪಿ ಚನ್ನಪಟ್ಟಣ ಕ್ಷೇತ್ರದ ಪ್ರಮುಖರ ಸಭೆ ನಡೆಸಿದ್ದೇವೆ. ಈ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜಣ್ಣ, ನಮ್ಮ ಪಕ್ಷದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತನಾರಾಯಣ್, ಎರಡೂ ಪಕ್ಷಗಳ ಮುಖಂಡರು ಭಾಗವಹಿಸಿದ್ದರು ಎಂದು ವಿವರಿಸಿದರು.
ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಎನ್‍ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ, ಚನ್ನಪಟ್ಟಣ ಉಪ ಚುನಾವಣೆಯ ಕಳೆದೆರಡು ತಿಂಗಳುಗಳಿಂದ ರಾಜ್ಯದ ಗಮನ ಸೆಳೆದಿದೆ. ನಿನ್ನೆ ನಾಮಪತ್ರ ಸಲ್ಲಿಸಿದ್ದೇನೆ. ರೈತ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ ನಾಯಕ ಮತ್ತು ನನ್ನ ತಂದೆ ಎಚ್.ಡಿ.ಕುಮಾರಸ್ವಾಮಿ, ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡರು ಕುಳಿತು ಚರ್ಚಿಸಿ ನನ್ನ ಸ್ಪರ್ಧೆ ಬಗ್ಗೆ ತೀರ್ಮಾನಿಸಿದ್ದಾರೆ ಎಂದರು.
ಬದಲಾದ ರಾಜಕಾರಣದ ಸನ್ನಿವೇಶದಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ನನ್ನನ್ನು ಘೋಷಿಸಿದ್ದಾರೆ. ನಿನ್ನೆ ನಾಮಪತ್ರ ಸಲ್ಲಿಕೆಗೆ ಸಹಸ್ರಾರು ಸಂಖ್ಯೆಯಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಬಂದು ಆಶೀರ್ವಾದ ಮಾಡಿದ್ದಾರೆ. 3 ಕಡೆ ಎನ್‍ಡಿಎ ಅಭ್ಯರ್ಥಿಗಳ ಗೆಲುವಿಗೆ ಸ್ಪಷ್ಟ ಸಂದೇಶವನ್ನು ವಿಜಯೇಂದ್ರ ಅವರು ಕೊಟ್ಟಿದ್ದಾರೆ ಎಂದು ವಿವರಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತನಾರಾಯಣ್ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು