12:27 PM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

3 ವರ್ಷ ಕಳೆದರೂ ಪುನರ್ವಸತಿ ಕಲ್ಪಿಸದ ಸರಕಾರ: ಸೂರಿನ ನಿರೀಕ್ಷೆಯಲ್ಲೇ ಕೊನೆಯುಸಿರೆಳೆದ ಮಹಾಮಳೆ ಸಂತ್ರಸ್ತ!!

01/08/2022, 22:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

2019ರ ಮಹಾಮಳೆಗೆ ಮನೆ ಜಮೀನು ಕಳೆದುಕೊಂಡ ನೆರೆ ಸಂತ್ರಸ್ತರೊಬ್ಬರು ಸ್ವಂತ ಸೂರಿನ ನಿರೀಕ್ಷೆಯಲ್ಲೆ ಕೊನೆಯುಸಿರೆಳಿದ್ದಾರೆ.

ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲೆಮನೆಯ ನೆರೆ ಸಂತ್ರಸ್ತ ನಾರಾಯಣಗೌಡ (65) 2019 ರಲ್ಲಿ ಸುರಿದ ಮಹಾಮಳೆಯಿಂದಾಗಿ ಮನೆ ಹಾಗೂ ಜಮೀನನ್ನು ಕಳೆದುಕೊಂಡಿದ್ದರು. ಮನೆಯೊಂದಿಗೆ ಮನೆಯಲ್ಲಿದ್ದ ವಸ್ತುಗಳು, ಚಿನ್ನಾಭರಣಗಳು, ದಾಖಲೆ ಪತ್ರಗಳು ಎಲ್ಲವನ್ನು ಕಳೆದುಕೊಂಡು ಅಕ್ಷರಶಃ ಬರಿಗೈನಲ್ಲಿ ಬೀದಿಗೆ ಬಿದ್ದಿದ್ದರು.

ಮೂಡಿಗೆರೆಯಲ್ಲಿ ಬಾಡಿಗೆ ಮನೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದ ನಾರಾಯಣ ಗೌಡ ಅವರು ಸರ್ಕಾರ ಮನೆ ಕಟ್ಟಲು ಪರ್ಯಾಯ  ಜಾಗ ಹಾಗೂ ಪರ್ಯಾಯ ಕೃಷಿಭೂಮಿಯ ನಿರೀಕ್ಷೆಯಲ್ಲಿದ್ದರು. ಆದರೆ 3 ವರ್ಷ ಕಳೆದರೂ ಸರ್ಕಾರ ಪುನರ್ವಸತಿ ಕಲ್ಪಿಸದೇ ಇರುವುದರಿಂದ ಆ ಕೊರಗಿನಲ್ಲಿ ಜೀವನ ಸಾಗಿಸುತ್ತಿದ್ದರು.

2019 ರಲ್ಲಿ ತಲೆಮಾರುಗಳಿಂದ ಬದುಕಿದ್ದ ಮನೆ ಕೊಚ್ಚಿ ಹೋದಾಗ ಆಘಾತಕ್ಕೆ ಒಳಗಾಗಿ ಪಾಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿದ್ದರು. ಸ್ವಂತ ಮನೆಯ ನಿರೀಕ್ಷೆಯಲ್ಲಿಯೇ ನಾರಾಯಣ ಗೌಡ ಅವರು ಸೋಮವಾರ ಸಂಜೆ ಮೂಡಿಗೆರೆಯ ಬಾಡಿಗೆ ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಮಲೆಮನೆ ಗ್ರಾಮಕ್ಕೆ ತೆಗೆದುಕೊಂಡು ಹೋದರೂ ಅಂತಿಮ ದರ್ಶನಕ್ಕೆ ಮೃತದೇಹವನ್ನು ಇಡಲು ಮನೆಯೂ ಕೂಡ ಇಲ್ಲದಂತಾಗಿರುವುದು ನಿಜಕ್ಕೂ ವಿಪರ್ಯಾಸವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು