2:29 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

3 ವರ್ಷ ಕಳೆದರೂ ಪುನರ್ವಸತಿ ಕಲ್ಪಿಸದ ಸರಕಾರ: ಸೂರಿನ ನಿರೀಕ್ಷೆಯಲ್ಲೇ ಕೊನೆಯುಸಿರೆಳೆದ ಮಹಾಮಳೆ ಸಂತ್ರಸ್ತ!!

01/08/2022, 22:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

2019ರ ಮಹಾಮಳೆಗೆ ಮನೆ ಜಮೀನು ಕಳೆದುಕೊಂಡ ನೆರೆ ಸಂತ್ರಸ್ತರೊಬ್ಬರು ಸ್ವಂತ ಸೂರಿನ ನಿರೀಕ್ಷೆಯಲ್ಲೆ ಕೊನೆಯುಸಿರೆಳಿದ್ದಾರೆ.

ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲೆಮನೆಯ ನೆರೆ ಸಂತ್ರಸ್ತ ನಾರಾಯಣಗೌಡ (65) 2019 ರಲ್ಲಿ ಸುರಿದ ಮಹಾಮಳೆಯಿಂದಾಗಿ ಮನೆ ಹಾಗೂ ಜಮೀನನ್ನು ಕಳೆದುಕೊಂಡಿದ್ದರು. ಮನೆಯೊಂದಿಗೆ ಮನೆಯಲ್ಲಿದ್ದ ವಸ್ತುಗಳು, ಚಿನ್ನಾಭರಣಗಳು, ದಾಖಲೆ ಪತ್ರಗಳು ಎಲ್ಲವನ್ನು ಕಳೆದುಕೊಂಡು ಅಕ್ಷರಶಃ ಬರಿಗೈನಲ್ಲಿ ಬೀದಿಗೆ ಬಿದ್ದಿದ್ದರು.

ಮೂಡಿಗೆರೆಯಲ್ಲಿ ಬಾಡಿಗೆ ಮನೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದ ನಾರಾಯಣ ಗೌಡ ಅವರು ಸರ್ಕಾರ ಮನೆ ಕಟ್ಟಲು ಪರ್ಯಾಯ  ಜಾಗ ಹಾಗೂ ಪರ್ಯಾಯ ಕೃಷಿಭೂಮಿಯ ನಿರೀಕ್ಷೆಯಲ್ಲಿದ್ದರು. ಆದರೆ 3 ವರ್ಷ ಕಳೆದರೂ ಸರ್ಕಾರ ಪುನರ್ವಸತಿ ಕಲ್ಪಿಸದೇ ಇರುವುದರಿಂದ ಆ ಕೊರಗಿನಲ್ಲಿ ಜೀವನ ಸಾಗಿಸುತ್ತಿದ್ದರು.

2019 ರಲ್ಲಿ ತಲೆಮಾರುಗಳಿಂದ ಬದುಕಿದ್ದ ಮನೆ ಕೊಚ್ಚಿ ಹೋದಾಗ ಆಘಾತಕ್ಕೆ ಒಳಗಾಗಿ ಪಾಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿದ್ದರು. ಸ್ವಂತ ಮನೆಯ ನಿರೀಕ್ಷೆಯಲ್ಲಿಯೇ ನಾರಾಯಣ ಗೌಡ ಅವರು ಸೋಮವಾರ ಸಂಜೆ ಮೂಡಿಗೆರೆಯ ಬಾಡಿಗೆ ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಮಲೆಮನೆ ಗ್ರಾಮಕ್ಕೆ ತೆಗೆದುಕೊಂಡು ಹೋದರೂ ಅಂತಿಮ ದರ್ಶನಕ್ಕೆ ಮೃತದೇಹವನ್ನು ಇಡಲು ಮನೆಯೂ ಕೂಡ ಇಲ್ಲದಂತಾಗಿರುವುದು ನಿಜಕ್ಕೂ ವಿಪರ್ಯಾಸವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು