4:38 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

3 ವರ್ಷದ ಬಳಿಕ ಮತ್ತೆ ಹಾರಾಡಲಿದೆ ಜೆಟ್  ಏರ್‌ವೇಸ್‌: ಇದೊಂದು ಭಾವನಾತ್ಮಕ ಕ್ಷಣ ಎಂದ ಸಿಇಒ

09/05/2022, 20:51

ಹೊಸದಿಲ್ಲಿ(reporterkarnataka.com):ಆರ್ಥಿಕ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಂಡಿದ್ದ ದೇಶೀಯ ವಿಮಾನಯಾನ ಸಂಸ್ಥೆ ಜೆಟ್ ಏರ್‌ವೇಸ್‌ಗೆ ಗೃಹ ಸಚಿವಾಲಯ ಲೈನ್ ಕ್ಲಿಯರ್ ಮಾಡಿದೆ. ವಾಣಿಜ್ಯ ವಿಮಾನ ಸೇವೆಗಳನ್ನು ನಿರ್ವಹಿಸಲು ನಾಗರಿಕ ವಿಮಾನಯಾನ ಮಹಾನಿರ್ದೇಶಕರಿಂದ ಅನುಮತಿ ದೊರೆತಿದೆ. ಏಪ್ರಿಲ್ 17, 2019 ರಂದು ಜೆಟ್ ಏರ್‌ವೇಸ್‌ನ ಹಾರಾಟ ಕೊನೆಗೊಂಡಿತ್ತು. ಮೂರು ವರ್ಷಗಳ ನಂತರ ಜೆಟ್ ಏರ್ವೇಸ್ ತನ್ನ ರೆಕ್ಕೆಗಳನ್ನು ಬಿಚ್ಚಿ ಹಾರಾಡತೊಡಗಿದೆ. ಮೇ 5ರಂದು ಜೆಟ್ ಏರ್‌ವೇಸ್ ಹೈದರಾಬಾದ್‌ನಿಂದ ದೆಹಲಿಗೆ ಪರೀಕ್ಷಾರ್ಥ ಹಾರಾಟವನ್ನು ನಡೆಸಿತು.

ಶೀಘ್ರದಲ್ಲೇ ವಾಣಿಜ್ಯ ಸೇವೆಗಳನ್ನು ಪ್ರಾರಂಭಿಸುವುದಾಗಿ ಕಂಪನಿಯ ಸಿಇಒ ಸಂಜೀವ್ ಕಪೂರ್ ಘೋಷಿಸಿದ್ದಾರೆ. ಜೆಟ್ ಏರ್‌ವೇಸ್ ಕುಟುಂಬಕ್ಕೆ ಇದೊಂದು ಭಾವನಾತ್ಮಕ ಕ್ಷಣವಾಗಿದೆ ಎಂದು ವರ್ಣಿಸಿದ್ದಾರೆ. ಮೂರು ವರ್ಷಗಳ ನಂತರ ಜೆಟ್ ಏರ್‌ವೇಸ್‌ನ 2.0 ತನ್ನ ಸೇವೆಗಳನ್ನು ಪ್ರಾರಂಭಿಸಿದ್ದಕ್ಕಾಗಿ ಸಂತೋಷವಾಗಿದೆ. ಆಕಾಶದಲ್ಲಿ ಜೆಟ್ ಅನ್ನು ಮರಳಿ ಪಡೆಯಲು ಶ್ರಮಿಸಿದ ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳು ಎಂದಿದ್ದಾರೆ.

2019ರಲ್ಲಿ ಜೆಟ್ ಏರ್‌ವೇಸ್ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿತ್ತು. ಹಣಕಾಸಿನ ನೆರವಿನ ಕೊರತೆಯಿಂದಾಗಿ ಜೆಟ್ ಏರ್‌ವೇಸ್ ಅನ್ನು ಮುಚ್ಚುವ ಪ್ರಸ್ತಾಪವಾಯಿತು. ಕೊನೆಗೆ ಮ್ಯಾನೇಜ್ ಮೆಂಟ್ ಕೂಡ ಕೈಕೊಟ್ಟ ಪರಿಣಾಮವಾಗಿ ಅನಿವಾರ್ಯ ಕಾರಣಗಳಿಂದ ಮುಚ್ಚಿದೆವು. ಏಪ್ರಿಲ್ 2019 ರಲ್ಲಿ ಕಂಪನಿ ಮುಚ್ಚುವ ಮೊದಲು 3,500 ರೂ. ಕೋಟಿ ಸಾಲವನ್ನು ಹೊತ್ತುಕೊಳ್ಳಬೇಕಾಯಿತು. ಪ್ರಯಾಣಿಕರ ಟಿಕೆಟ್ ರದ್ದುಗೊಂಡಿದ್ದರಿಂದ ಇನ್ನೂ 3,500 ಕೋಟಿ ರೂ. ಹೆಚ್ಚುವರಿ ಸಾಲದ ಜೊತೆಗೆ ಇತರೆ ಸಾಲ ಸೇರಿ ಒಟ್ಟು 8,500 ಕೋಟಿ ರೂ. ಹೊಡೆತ ಬಿತ್ತು. ಪರಿಣಾಮವಾಗಿ, ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು. ಜೆಟ್ ಏರ್‌ವೇಸ್‌ನ 16,500 ಉದ್ಯೋಗಿಗಳು ರಸ್ತೆಗೆ ಬಿದ್ದರು. ಇದೀಗ ಜೆಟ್‌ ಏರ್‌ವೇಸ್‌ ಪುನಃ ಪ್ರಾರಂಭವಾಗಿರುವುದು ಕಂಪನಿಗೆ ರೆಕ್ಕೆ ಬಂದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು