1:45 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

3 ವರ್ಷದ ಬಳಿಕ ಮತ್ತೆ ಹಾರಾಡಲಿದೆ ಜೆಟ್  ಏರ್‌ವೇಸ್‌: ಇದೊಂದು ಭಾವನಾತ್ಮಕ ಕ್ಷಣ ಎಂದ ಸಿಇಒ

09/05/2022, 20:51

ಹೊಸದಿಲ್ಲಿ(reporterkarnataka.com):ಆರ್ಥಿಕ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಂಡಿದ್ದ ದೇಶೀಯ ವಿಮಾನಯಾನ ಸಂಸ್ಥೆ ಜೆಟ್ ಏರ್‌ವೇಸ್‌ಗೆ ಗೃಹ ಸಚಿವಾಲಯ ಲೈನ್ ಕ್ಲಿಯರ್ ಮಾಡಿದೆ. ವಾಣಿಜ್ಯ ವಿಮಾನ ಸೇವೆಗಳನ್ನು ನಿರ್ವಹಿಸಲು ನಾಗರಿಕ ವಿಮಾನಯಾನ ಮಹಾನಿರ್ದೇಶಕರಿಂದ ಅನುಮತಿ ದೊರೆತಿದೆ. ಏಪ್ರಿಲ್ 17, 2019 ರಂದು ಜೆಟ್ ಏರ್‌ವೇಸ್‌ನ ಹಾರಾಟ ಕೊನೆಗೊಂಡಿತ್ತು. ಮೂರು ವರ್ಷಗಳ ನಂತರ ಜೆಟ್ ಏರ್ವೇಸ್ ತನ್ನ ರೆಕ್ಕೆಗಳನ್ನು ಬಿಚ್ಚಿ ಹಾರಾಡತೊಡಗಿದೆ. ಮೇ 5ರಂದು ಜೆಟ್ ಏರ್‌ವೇಸ್ ಹೈದರಾಬಾದ್‌ನಿಂದ ದೆಹಲಿಗೆ ಪರೀಕ್ಷಾರ್ಥ ಹಾರಾಟವನ್ನು ನಡೆಸಿತು.

ಶೀಘ್ರದಲ್ಲೇ ವಾಣಿಜ್ಯ ಸೇವೆಗಳನ್ನು ಪ್ರಾರಂಭಿಸುವುದಾಗಿ ಕಂಪನಿಯ ಸಿಇಒ ಸಂಜೀವ್ ಕಪೂರ್ ಘೋಷಿಸಿದ್ದಾರೆ. ಜೆಟ್ ಏರ್‌ವೇಸ್ ಕುಟುಂಬಕ್ಕೆ ಇದೊಂದು ಭಾವನಾತ್ಮಕ ಕ್ಷಣವಾಗಿದೆ ಎಂದು ವರ್ಣಿಸಿದ್ದಾರೆ. ಮೂರು ವರ್ಷಗಳ ನಂತರ ಜೆಟ್ ಏರ್‌ವೇಸ್‌ನ 2.0 ತನ್ನ ಸೇವೆಗಳನ್ನು ಪ್ರಾರಂಭಿಸಿದ್ದಕ್ಕಾಗಿ ಸಂತೋಷವಾಗಿದೆ. ಆಕಾಶದಲ್ಲಿ ಜೆಟ್ ಅನ್ನು ಮರಳಿ ಪಡೆಯಲು ಶ್ರಮಿಸಿದ ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳು ಎಂದಿದ್ದಾರೆ.

2019ರಲ್ಲಿ ಜೆಟ್ ಏರ್‌ವೇಸ್ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿತ್ತು. ಹಣಕಾಸಿನ ನೆರವಿನ ಕೊರತೆಯಿಂದಾಗಿ ಜೆಟ್ ಏರ್‌ವೇಸ್ ಅನ್ನು ಮುಚ್ಚುವ ಪ್ರಸ್ತಾಪವಾಯಿತು. ಕೊನೆಗೆ ಮ್ಯಾನೇಜ್ ಮೆಂಟ್ ಕೂಡ ಕೈಕೊಟ್ಟ ಪರಿಣಾಮವಾಗಿ ಅನಿವಾರ್ಯ ಕಾರಣಗಳಿಂದ ಮುಚ್ಚಿದೆವು. ಏಪ್ರಿಲ್ 2019 ರಲ್ಲಿ ಕಂಪನಿ ಮುಚ್ಚುವ ಮೊದಲು 3,500 ರೂ. ಕೋಟಿ ಸಾಲವನ್ನು ಹೊತ್ತುಕೊಳ್ಳಬೇಕಾಯಿತು. ಪ್ರಯಾಣಿಕರ ಟಿಕೆಟ್ ರದ್ದುಗೊಂಡಿದ್ದರಿಂದ ಇನ್ನೂ 3,500 ಕೋಟಿ ರೂ. ಹೆಚ್ಚುವರಿ ಸಾಲದ ಜೊತೆಗೆ ಇತರೆ ಸಾಲ ಸೇರಿ ಒಟ್ಟು 8,500 ಕೋಟಿ ರೂ. ಹೊಡೆತ ಬಿತ್ತು. ಪರಿಣಾಮವಾಗಿ, ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು. ಜೆಟ್ ಏರ್‌ವೇಸ್‌ನ 16,500 ಉದ್ಯೋಗಿಗಳು ರಸ್ತೆಗೆ ಬಿದ್ದರು. ಇದೀಗ ಜೆಟ್‌ ಏರ್‌ವೇಸ್‌ ಪುನಃ ಪ್ರಾರಂಭವಾಗಿರುವುದು ಕಂಪನಿಗೆ ರೆಕ್ಕೆ ಬಂದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು