3:08 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್ ಐಆರ್ ದಾಖಲು

08/05/2025, 19:28

ಬೆಂಗಳೂರು(reporterkarnataka.com): ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆ ಕೊಡಿಸುವುದಾಗಿ ಪರಿಸರ‌ ವಿಜ್ಞಾನ ವಿಭಾಗದ ಪ್ರೊಫೆಸರ್ ಒಬ್ಬರಿಗೆ 35 ಲಕ್ಷ ರೂಪಾಯಿ ವಂಚಿದ ಪ್ರಕರಣ ವರದಿಯಾಗಿದೆ.
ಈ‌ ಸಂಬಂಧ ಗೋವಿಂದರಾಜ್ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯಡಿ‌ U/s 318 (4) 316(2) 352,351(2) 351 ( 3) ಅಡಿ‌ ವಂಚನೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ದೂರದಾರರಾದ ಆರ್.ಕೆ.ಸೋಮಶೇಖರ್ ಅವರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ಪರಿಸರ ವಿಭಾಗದ ಪ್ರೋಪೆಸರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಸ್ನೇಹಿತರ‌ ಮೂಲಕ 2015 ರಂದು ಪರಿಚಯವಾಗುತ್ತದೆ.
ಬಿ.ಜಿ‌. ರವಿಕುಮಾರ್ ಅವರು ತಮಗೆ ಸರ್ಕಾರದಲ್ಲಿ ಹಲವಾರು ಪ್ರಭಾವಿ ಸಚಿವರ ಪರಿಚಯವಿದ್ದು, ಆ ಪರಿಚಯದ ಮೂಲಕ ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ
ರಿಜಿಸ್ಟ್ರಾರ್ ಹುದ್ದೆ ಕೊಡಿಸುವುದಾಗಿ ನಂಬಿಕೆ ಹುಟ್ಟಿಸುತ್ತಾರೆ. ಅದಕ್ಕೆ 50 ಲಕ್ಷ ರೂಪಾಯಿ ನೀಡಬೇಕಾಗುತ್ತದೆ. ಬಿ.ಜಿ.ರವಿಕುಮಾರ್ ಮಾತು ನಂಬಿದ ಆರ್.ಕೆ.ಸೋಮಶೇಖರ್ ಅವರು ಮೊದಲ ಕಂತಿನಲ್ಲಿ 20 ಲಕ್ಷ ರೂಪಾಯಿ ಹಾಗೂ ಬಂಗಾರಪೇಟೆ ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಪೂರ್ಣಿಮಾ ಅವರ ಮುಖಾಂತರ 15 ಲಕ್ಷ ರೂಪಾಯಿ ಪಾವತಿರಿಸುತ್ತಾರೆ. ಆದರೆ ಬಿ.ಜಿ.ರವಿಕುಮಾರ್ ಬರವಸೆ ನೀಡಿದಂತೆ
ರಿಜಿಸ್ಟ್ರಾರ್ ಹುದ್ದೆ ಕೊಡಿಸುವುದಿಲ್ಲ, 2019 ರಂದು ಆರ್.ಕೆ. ಶೇಖರ್ ಅವರು ಸೇವೆಯಿಂದ ನಿವೃತ್ತರಾಗುತ್ತಾರೆ. ಬಿ.ಜಿ.ರವಿಕುಮಾರ್ 35 ಲಕ್ಷ ರೂಪಾಯಿ ವಾಪಾಸ್ ನೀಡದೆ ವಂದಿಸುತ್ತಾರೆ. ಈ ಸಂಬಂದ 05-05-2025 ರಂದು‌ ಆರ್.ಕೆ‌. ಸೋಮಶೇಖರ್ ಅವರು ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಬಿ.ಜಿ.ರವಿಕುಮಾರ್ ವಿರುದ್ದ ದೂರು ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು