1:26 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

3ನೇ ಅಲೆಯ ಭೀತಿ: ಕೊರೊನಾ ಲಸಿಕೆಗಾಗಿ ಮುಗಿದ ಬಿದ್ದ ನಾಗರಿಕರು: ವೆನ್ಲಾಕ್ ಆಯುಷ್ ಕೇಂದ್ರದಲ್ಲಿ ನೂಕುನುಗ್ಗಲು

03/08/2021, 15:30

ಮಂಗಳೂರು(reporterkarnataka.com): ಕೊರೊನಾ ಲಸಿಕೆ ಪಡೆಯಲು ಮಂಗಳವಾರ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ನೂಕು ನುಗ್ಗಲು ಉಂಟಾಯಿತು. ಕೊರೊನಾ 3ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಲಸಿಕೆ ಪಡೆದುಕೊಳ್ಳಲು ನಾಗರಿಕರು ಭಾರಿ ಸಂಖ್ಯೆಯಲ್ಲಿ ಸೇರಿದ್ದರು.

ಬೆಳಗ್ಗೆ 8 ಗಂಟೆಯಿಂದಲೇ ದೊಡ್ಡ ಸಂಖ್ಯೆಯಲ್ಲಿ ಜನರು ಆಧಾರ್ ಕಾರ್ಡ್, ಮೊಬೈಲ್ ಸಜ್ಜು ಮಾಡಿ

ವೆನ್ಲಾಕ್ ಆಸ್ಪತ್ರೆಯ ಆಯುಷ್ ಕೇಂದ್ರದಲ್ಲಿ ಸೇರಿದ್ದರು. ಕೋವ್ಯಾಕ್ಸಿನ್ ಎರಡನೇ ಡೋಸ್ 400, ಕೋವಿಶೀಲ್ಡ್ ಎರಡನೇ ಡೋಸ್ 200 ಹಾಗೂ ಅನನಿವಾಸಿ ಭಾರತೀಯರಿಗೆ ಕೋವಿಸೀಲ್ಡ್ ಎರಡನೇ ಡೋಸ್ 100 ವಿತರಿಸಲಾಗುವುದು ಎಂದು ಜಿಲ್ಲಾಡಳಿತ ಪ್ರಕಟಣೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಗೆಯೇ ಲಸಿಕೆ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ನೆರೆದಿದ್ದರು.

ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಟೋಕನ್ ವ್ಯವಸ್ಥೆ ಮಾಡಿ ಉಳಿದವರನ್ನು ಹೊರಗೆ ಕಳುಹಿಸಿದರು. ಲಸಿಕೆ ಪಡೆಯಲು ಬಂದವರಲ್ಲಿ ಶೇ. 75ಕ್ಕಿಂತ ಹೆಚ್ಚು ಜನರು ಲಸಿಕೆ ಇಲ್ಲದೆ ವಾಪಸ್ ಹೋಗ ಬೇಕಾಯಿತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 11 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು