2:25 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

3ನೇ ಅಲೆಯ ಭೀತಿ: ಕೊರೊನಾ ಲಸಿಕೆಗಾಗಿ ಮುಗಿದ ಬಿದ್ದ ನಾಗರಿಕರು: ವೆನ್ಲಾಕ್ ಆಯುಷ್ ಕೇಂದ್ರದಲ್ಲಿ ನೂಕುನುಗ್ಗಲು

03/08/2021, 15:30

ಮಂಗಳೂರು(reporterkarnataka.com): ಕೊರೊನಾ ಲಸಿಕೆ ಪಡೆಯಲು ಮಂಗಳವಾರ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ನೂಕು ನುಗ್ಗಲು ಉಂಟಾಯಿತು. ಕೊರೊನಾ 3ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಲಸಿಕೆ ಪಡೆದುಕೊಳ್ಳಲು ನಾಗರಿಕರು ಭಾರಿ ಸಂಖ್ಯೆಯಲ್ಲಿ ಸೇರಿದ್ದರು.

ಬೆಳಗ್ಗೆ 8 ಗಂಟೆಯಿಂದಲೇ ದೊಡ್ಡ ಸಂಖ್ಯೆಯಲ್ಲಿ ಜನರು ಆಧಾರ್ ಕಾರ್ಡ್, ಮೊಬೈಲ್ ಸಜ್ಜು ಮಾಡಿ

ವೆನ್ಲಾಕ್ ಆಸ್ಪತ್ರೆಯ ಆಯುಷ್ ಕೇಂದ್ರದಲ್ಲಿ ಸೇರಿದ್ದರು. ಕೋವ್ಯಾಕ್ಸಿನ್ ಎರಡನೇ ಡೋಸ್ 400, ಕೋವಿಶೀಲ್ಡ್ ಎರಡನೇ ಡೋಸ್ 200 ಹಾಗೂ ಅನನಿವಾಸಿ ಭಾರತೀಯರಿಗೆ ಕೋವಿಸೀಲ್ಡ್ ಎರಡನೇ ಡೋಸ್ 100 ವಿತರಿಸಲಾಗುವುದು ಎಂದು ಜಿಲ್ಲಾಡಳಿತ ಪ್ರಕಟಣೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಗೆಯೇ ಲಸಿಕೆ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ನೆರೆದಿದ್ದರು.

ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಟೋಕನ್ ವ್ಯವಸ್ಥೆ ಮಾಡಿ ಉಳಿದವರನ್ನು ಹೊರಗೆ ಕಳುಹಿಸಿದರು. ಲಸಿಕೆ ಪಡೆಯಲು ಬಂದವರಲ್ಲಿ ಶೇ. 75ಕ್ಕಿಂತ ಹೆಚ್ಚು ಜನರು ಲಸಿಕೆ ಇಲ್ಲದೆ ವಾಪಸ್ ಹೋಗ ಬೇಕಾಯಿತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 11 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು