8:26 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

3ನೇ ಅಲೆಯ ಭೀತಿ: ಕೊರೊನಾ ಲಸಿಕೆಗಾಗಿ ಮುಗಿದ ಬಿದ್ದ ನಾಗರಿಕರು: ವೆನ್ಲಾಕ್ ಆಯುಷ್ ಕೇಂದ್ರದಲ್ಲಿ ನೂಕುನುಗ್ಗಲು

03/08/2021, 15:30

ಮಂಗಳೂರು(reporterkarnataka.com): ಕೊರೊನಾ ಲಸಿಕೆ ಪಡೆಯಲು ಮಂಗಳವಾರ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ನೂಕು ನುಗ್ಗಲು ಉಂಟಾಯಿತು. ಕೊರೊನಾ 3ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಲಸಿಕೆ ಪಡೆದುಕೊಳ್ಳಲು ನಾಗರಿಕರು ಭಾರಿ ಸಂಖ್ಯೆಯಲ್ಲಿ ಸೇರಿದ್ದರು.

ಬೆಳಗ್ಗೆ 8 ಗಂಟೆಯಿಂದಲೇ ದೊಡ್ಡ ಸಂಖ್ಯೆಯಲ್ಲಿ ಜನರು ಆಧಾರ್ ಕಾರ್ಡ್, ಮೊಬೈಲ್ ಸಜ್ಜು ಮಾಡಿ

ವೆನ್ಲಾಕ್ ಆಸ್ಪತ್ರೆಯ ಆಯುಷ್ ಕೇಂದ್ರದಲ್ಲಿ ಸೇರಿದ್ದರು. ಕೋವ್ಯಾಕ್ಸಿನ್ ಎರಡನೇ ಡೋಸ್ 400, ಕೋವಿಶೀಲ್ಡ್ ಎರಡನೇ ಡೋಸ್ 200 ಹಾಗೂ ಅನನಿವಾಸಿ ಭಾರತೀಯರಿಗೆ ಕೋವಿಸೀಲ್ಡ್ ಎರಡನೇ ಡೋಸ್ 100 ವಿತರಿಸಲಾಗುವುದು ಎಂದು ಜಿಲ್ಲಾಡಳಿತ ಪ್ರಕಟಣೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಗೆಯೇ ಲಸಿಕೆ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ನೆರೆದಿದ್ದರು.

ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಟೋಕನ್ ವ್ಯವಸ್ಥೆ ಮಾಡಿ ಉಳಿದವರನ್ನು ಹೊರಗೆ ಕಳುಹಿಸಿದರು. ಲಸಿಕೆ ಪಡೆಯಲು ಬಂದವರಲ್ಲಿ ಶೇ. 75ಕ್ಕಿಂತ ಹೆಚ್ಚು ಜನರು ಲಸಿಕೆ ಇಲ್ಲದೆ ವಾಪಸ್ ಹೋಗ ಬೇಕಾಯಿತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 11 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು