6:08 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

3ನೇ ಅತಿದೊಡ್ಡ ಆರ್ಥಿಕ ರಾಷ್ಟ್ರಕ್ಕೆ ಸ್ಫೂರ್ತಿದಾಯಕ ಬಜೆಟ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಣ್ಣನೆ

01/02/2025, 18:11

*ಬಡ ಮತ್ತು ಮದ್ಯಮ ವರ್ಗವವರ ಪ್ರಗತಿಗೆ ಪೂರಕವಾಗಿದೆ*

*ಕಿಸಾನ್ ಕ್ರೆಡಿಟ್ ಸಾಲ ಹೆಚ್ಚಿಸಿ ಅನ್ನದಾತರಿಗೆ ಆಶಾದಾಯಕವಾಗಿದೆ*

*ಮಾರಣಾಂತಿಕ ಕ್ಯಾನ್ಸರ್ ರೋಗಿಗಳ ಪಾಲಿಗೆ ಸಂಜೀವಿನಿ*

ನವದೆಹಲಿ(reporterkarnataka.com): ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ರಾಷ್ಟವಾಗುವ ಧ್ಯೇಯಕ್ಕೆ ಅತ್ಯಂತ ಸ್ಫೂರ್ತಿದಾಯಕ ಬಜೆಟ್ ಇದಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಬಣ್ಣಿಸಿದರು.
ದೆಹಲಿಯಲ್ಲಿ ಇಂದು ಪ್ರಸಕ್ತ ಬಜೆಟ್ ಕುರಿತು ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿ, ದೇಶದ ಆರ್ಥಿಕ ಪ್ರಗತಿಯ ಮುನ್ನೋಟಕ್ಕೆ ಆಶಾದಾಯಕ ಬಜೆಟ್ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಬಡ ಮತ್ತು ಮಧ್ಯಮ ವರ್ಗಗಳವರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ಪೂರಕವಾಗಿ ಪ್ರಸಕ್ತ ಸಾಲಿನ ಮುಂಗಡ ಪತ್ರವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ ಎಂದು ಜೋಶಿ ಹೇಳಿದರು.


ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ಆಡಳಿತ, ನಾಯಕತ್ವ ಮತ್ತು ದೂರದೃಷ್ಟಿಯಿಂದಾಗಿ ಭಾರತ ಆರ್ಥಿಕವಾಗಿ ಬಹು ವೇಗದಲ್ಲಿ ಪ್ರಗತಿ ಸಾಧಿಸುತ್ತಿದೆ ಎಂದು ಹೇಳಿದರು.
ಎನ್ ಡಿಎ ಸರ್ಕಾರ, ತನ್ನ ಮೂರನೇ ಅವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗಗಳವರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿರಿಸಿ ಅಭೂತಪೂರ್ವ ಬಜೆಟ್ ಅನ್ನು ಪ್ರಸ್ತುತಪಡಿಸಿದೆ ಎಂದರು.
ಕೇಂದ್ರದ ಈ ಬಜೆಟ್ ಸಮೃದ್ಧ, ಸ್ವಾವಲಂಬಿ ಮತ್ತು ಜಾಗತಿಕವಾಗಿ ಮುನ್ನಡೆ ಸಾಧಿಸುತ್ತಿರುವ ಭಾರತಕ್ಕೆ ಮತ್ತಷ್ಟು ಸುಭದ್ರ ಅಡಿಪಾಯ ಹಾಕಿದೆ. ಆರ್ಥಿಕತೆ ಮತ್ತು ಹೂಡಿಕೆಯಲ್ಲಿ ಗಣನೀಯ ಪ್ರಗತಿಗೆ ದಿಕ್ಸೂಚಿಯಂತಿದೆ ಎಂದರು.
*ಜನರ ನಿರೀಕ್ಷೆ ಮೀರಿದ ಆಶಾದಾಯಕ ಬಜೆಟ್:* 2024-25ನೇ ಆರ್ಥಿಕ ವರ್ಷದ ಪ್ರಸಕ್ತ ಬಜೆಟ್ ನಲ್ಲಿ ಮಧ್ಯಮ ವರ್ಗ, ಉದ್ಯಮ, ಕೃಷಿ, ಮೆಡಿಕಲ್ ಹೀಗೆ ಸರ್ವ ಕ್ಷೇತ್ರಕ್ಕೂ ಬಂಪರ್ ಕೊಡುಗೆ ನೀಡಲಾಗಿದೆ. ಇದೊಂದು ಜನರ ನಿರೀಕ್ಷೆಯನ್ನೂ ಮೀರಿದ ಅಭೂತಪೂರ್ವ ಬಜೆಟ್ ಆಗಿದೆ ಎಂದು ನುಡಿದರು.
ಪ್ರಮುಖವಾಗಿ 12 ಲಕ್ಷ ರೂಪಾಯಿವರೆಗೆ ಆದಾಯ ತೆರಿಗೆ ವಿನಾಯಿತಿ ಕಲ್ಪಿಸುವ ಮೂಲಕ ಮಧ್ಯಮ ವರ್ಗಕ್ಕೆ ಬಿಗ್ ಗಿಫ್ಟ್ ನೀಡಿದೆ. ಕಿಸಾನ್ ಕ್ರೆಡಿಟ್ ಕಾರ್ಡ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಿ ರೈತ ವರ್ಗಕ್ಕೆ ಆಶಾದಾಯಕವಾಗಿದೆ.
ಇನ್ನು, ದೇಶದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ತೆರೆಯಲು ನಿರ್ಧರಿಸಿ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಬಡ ರೋಗಿಗಳ ಪಾಲಿಗೆ ಸಂಜೀವಿನಿಯಾಗಿದೆ ಎಂದರು.

ಐಐಟಿ, ಮೆಡಿಕಲ್, ಆರೋಗ್ಯ, ಸಣ್ಣ ಉದ್ಯಮ ಹೀಗೆ ಸರ್ವ ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಸ್ಫೂರ್ತಿದಾಯಕ ಬಜೆಟ್ ಆಗಿದೆ ಎಂದು ಸಚಿವ ಜೋಶಿ ಸಂತಸ ವ್ಯಕ್ತಪಡಿಸಿದರು.
*ನವೀಕರಿಸಬಹುದಾದ ಇಂಧನಕ್ಕೆ ಉತ್ತೇಜನ:*
ಹೊಸ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಗಮನಾರ್ಹ ಉತ್ತೇಜನ ನೀಡಿದೆ. ಕೇಂದ್ರದಲ್ಲಿ ಯುಪಿಎ ಸರ್ಕಾರದ ಅವಧಿಯ ಬಜೆಟ್‌ನಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಶಕ್ತಿಯ ಉತ್ಪಾದನೆಗೆ ಸಾಧಾರಣ ಸಂಪನ್ಮೂಲಗಳನ್ನು ಮೀಸಲಿಡಲಾಗುತ್ತಿತ್ತು. ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ NDA ಸರ್ಕಾರ ತನ್ನ ನಿಧಿಯನ್ನು ಗಮನಾರ್ಹವಾಗಿ ವಿಸ್ತರಿಸಿದೆ ಎಂದರು.
ಒಟ್ಟಾರೆ ದೇಶದ ಸುಸ್ಥಿರತೆ, ಬೆಳವಣಿಗೆ ಮತ್ತು ಸಮೃದ್ಧಿಯೆಡೆಗೆ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸಿದೆ ಎಂದು ಸಚಿವರು ಪ್ರತಿಪಾದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು