1:09 AM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

4 ವರ್ಷದ ಪುತ್ರನನ್ನೇ ಹತ್ಯೆಗೈದ ಹೆತ್ತಬ್ಬೆ: ಬ್ಯಾಗ್ ನಲ್ಲಿ ಶವ ತುಂಬಿಸಿ ಕಾರಿನಲ್ಲಿ ಸಾಗಿಸುತ್ತಿದ್ದ ಕ್ರೂರಿ ತಾಯಿಯ ಬಂಧನ

09/01/2024, 15:34

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಹೆತ್ತಬ್ಬೆಯೊಬ್ಬಳು ತನ್ನ ಪುಟ್ಟ ಮಗನನ್ನು ಕೊಂದು ಮೃತದೇಹವನ್ನು ಬ್ಯಾಗಿನಲ್ಲಿಟ್ಟು ಕಾರಿನಲ್ಲಿ ಸಾಗಿಸುತ್ತಿದ್ದಾಗ ಪೊಲೀಸ್ ಬಲೆಗೆ ಬಿದ್ದ ಘಟನೆ ನಡೆದಿದೆ. ಆರೋಪಿ ಮಹಿಳೆಯನ್ನು ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಖಾಸಗಿ ಸ್ಟಾರ್ಟ್ ಅಪ್ ಕಂಪೆನಿಯ ಸಿಇಒ ಆಗಿರುವ 39ರ ಹರೆಯದ ಸುಚನಾ ಸೇಠ್ ಬಂಧಿತ ಮಹಿಳೆ. ಬೆಂಗಳೂರಿನ ‘ಮೈಂಡ್‌ಫುಲ್ ಎಐ ಲ್ಯಾಬ್’ ಎಂಬ ಕೃತಕ ಬುದ್ಧಿಮತ್ತೆ ಕಂಪೆನಿಯ ಸಹ ಸಂಸ್ಥಾಪಕಿ ಸುಚನಾ ಸೇಠ್ ಅವರ ಕಾರು ಚಾಲಕನೇ ಆರೋಪಿಯನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದಾನೆ.
ಉತ್ತರ ಗೋವಾದ ‘ಸೋಲ್ ಬ್ಯಾನಿಯನ್ ಗ್ರ್ಯಾಂಡ್’ ಹೋಟೆಲ್‌ಗೆ ಮಹಿಳೆ ತನ್ನ 4ರ ಹರೆಯದ ಪುತ್ರನೊಂದಿಗೆ ಶನಿವಾರ ತೆರಳಿದ್ದಳು. ಸೋಮವಾರ ಕೊಠಡಿ ತೆರವುಗೊಳಿಸಿ ಏಕಾಂಗಿಯಾಗಿ ಹೊರಬಂದಿದ್ದಳು. ಬೆಂಗಳೂರಿಗೆ ಮರಳಲು ಟ್ಯಾಕ್ಸಿ ಬಾಡಿಗೆ ಕೇಳಿದ್ದಳು. ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ಬಾಲಕನ ಬಗ್ಗೆ ವಿಚಾರಿಸಿದ್ದರು. ಸಂಬಂಧಿಕರ ಮನೆಯಲ್ಲಿ ಬಾಲಕನನ್ನು ಬಿಟ್ಟು ಬಂದಿರುವುದಾಗಿ ಮಹಿಳೆ ಸಬೂಬು ನೀಡಿ ಹೊಟೇಲ್ ನಿಂದ ಹೊರಬಂದಿದ್ದಳು. ಹೊಟೇಲ್ ಸಿಬ್ಬಂದಿಗಳು
ಕೊಠಡಿ ಶುಚಿಗೊಳಿಸುವಾಗ ರಕ್ತದ ಕಲೆಗಳನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಪರಿಶೀಲನೆ ನಡೆಸಿ ಮಹಿಳೆ ತೆರಳುತ್ತಿದ್ದ ಕಾರಿನ ಚಾಲಕನನ್ನು ಫೋನ್ ಮೂಲಕ ಸಂಪರ್ಕಿಸಿದ್ದಾರೆ. ಕೊಂಕಣಿಯಲ್ಲಿ ಮಾತನಾಡಿದ ಪೊಲೀಸರು, ಘಟನೆ ಬಗ್ಗೆ ಚಾಲಕನಿಗೆ ವಿವರಿಸಿದ್ದಾರೆ. ಆರೋಪಿ ಮಹಿಳೆಯನ್ನು ಪೊಲೀಸರಿಗೆ ಹಿಡಿದುಕೊಡಲು ಸೂಚನೆ ನೀಡಿದ್ದಾರೆ.
ಚಾಲಕನಿಗೆ ಈ ಮಾಹಿತಿ ತಿಳಿದಾಗ ಕಾರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಿತ್ರದುರ್ಗದಿಂದ ಹಿರಿಯೂರು ಕಡೆಗೆ ಸಾಗುತ್ತಿತ್ತು. ಐಮಂಗಲ ಸಮೀಪದ ಪೊಲೀಸ್ ಠಾಣೆ ಗಮನಿಸಿದ ಚಾಲಕ, ನೇರವಾಗಿ ಠಾಣೆಗೆ ಕಾರು ತಂದಿದ್ದಾರೆ. ಕಾರಿನ ಡಿಕ್ಕಿ ತೆರೆದಾಗ ಸೂಟ್ ಕೇಸ್ ಬ್ಯಾಗಿನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಮಹಿಳೆಯನ್ನು ಬಂಧಿಸಿ ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು