5:59 PM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

40% ಕಮಿಷನ್ ಆರೋಪ: ಪ್ರಧಾನಿ ಕಾರ್ಯಾಲಯದಿಂದ ಕರೆ?; ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ; ಭ್ರಷ್ಟರಲ್ಲಿ ಎಲ್ಲಿಲ್ಲದ ನಡುಕ.!

29/06/2022, 20:23

ಬೆಂಗಳೂರು(reporterkarnataka.com): ಪ್ರಧಾನಿ ಕಾರ್ಯಾಲಯದಿಂದ(ಪಿಎಂಒ)ಬಂದಿದೆ ಎನ್ನಲಾದ ಕರೆಯೊಂದು ದೂರದ ಬೆಂಗಳೂರಿನಲ್ಲಿ ಭಾರೀ ಕಂಪನ ಉಂಟು ಮಾಡಿದೆ. 40% ಕಮಿಷನ್ ಕುರಿತು ಗುತ್ತಿಗೆದಾರರು ಮಾಡಿರುವ ಆರೋಪದ ಬಗ್ಗೆ ಇದೀಗ  ಪ್ರಧಾನಿ ಕಾರ್ಯಾಲಯ ಕಾರ್ಯೋನ್ಮುಖವಾಗಿದೆ. ಈ ನಡುವೆ ಭ್ರಷ್ಟರಲ್ಲಿ ನಡುಕ ಉಂಟು ಮಾಡಿದೆ.

40% ಕಮಿಷನ್ ಆರೋಪ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವಾಗಲೇ ಈ ಕರೆ ಆಡಳಿತ ಪಕ್ಷದ ಬಿಜೆಪಿಯಲ್ಲಿ ಭಾರೀ ತಲ್ಲಣವನ್ನುಂಟು ಮಾಡಿದೆ. ಭ್ರಷ್ಟ ಸಚಿವರು, ಶಾಸಕರುಗಳಿಗೆ ನಿದ್ದೆ ಇಲ್ಲದ ರಾತ್ರಿಯನ್ನು ಇದು ತರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ರಾಜಕೀಯ ವೀಕ್ಷಕರು ಲೆಕ್ಕ ಹಾಕುತ್ತಾರೆ.

ಗುತ್ತಿಗೆದಾರರ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣ 

ಅವರಿಗೆ ಪ್ರಧಾನಿ ಕಾರ್ಯಾಲಯದಿಂದ ಕರೆ ಬಂದಿದೆ ಎಂಬ ಮಾಹಿತಿ ಇದೆ. ದೂರುದಾರರ ಮಾಹಿತಿ ನೀಡುವಂತೆ ಪಿಎಂಒದಿಂದ ಕೋರಲಾಗಿದೆ ಎಂದು ತಿಳಿದು ಬಂದಿದೆ.

ಪ್ರಧಾನಿ ಕಾರ್ಯಾಲಯದಿಂದ ಬಂದ ಕರೆಯಲ್ಲಿ

“ಅಧಿಕಾರಿಗಳು ನಿಮ್ಮನ್ನು ಸಂಪರ್ಕಿಸಲಿದ್ದಾರೆ. ಭ್ರಷ್ಟಾಚಾರದ ದಾಖಲೆ ನೀಡುವಂತೆ” ಸೂಚಿಸಲಾಯಿತು ಎನ್ನಲಾಗಿದೆ.

ವಿಶೇಷವೆಂದರೆ ಮೋದಿ ಬೆಂಗಳೂರಿಗೆ ಬರುವ ಮುನ್ನ ಕಳಪೆ ಕಾಮಗಾರಿಗೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯ ವರದಿ ತರಿಸಿಕೊಂಡಿತ್ತು. ಈ ಬಗ್ಗೆನೂ ತನಿಖೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತನಿಖೆಗೆ ಗೃಹ ಇಲಾಖೆಯ ತಂಡ ಬೆಂಗಳೂರಿಗೆ ಬರೋ ಸಾಧ್ಯತೆ ಇದೆ. ಗುತ್ತಿಗೆದಾರರ‌ ಸಂಘವೂ ರಾಜ್ಯ ಸರ್ಕಾರದ ವಿರುದ್ಧ ಸಾಕಷ್ಟು ಆರೋಪ ಮಾಡಿತ್ತು. ದಾಖಲೆಯನ್ನು ಸಿದ್ದಪಡಿಸಿಕೊಳ್ಳಲು ಪ್ರಧಾನಿ ಕಾರ್ಯಾಲಯ ಸೂಚಿಸಿದೆ ಎಂದು ಹೇಳಲಾಗಿದ್ದು, ಕೆಂಪಣ್ಣ ಅವರು ಪ್ರಧಾನಿ ಕಚೇರಿಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಿಎಂ ಒದಿಂದ ಬಂದಿದೆ ಎನ್ನಲಾದ  ಕರೆ ಕುರಿತು 

ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ನನಗೆ ಪ್ರಧಾನಿಯವರ ಕಚೇರಿಯಿಂದ ಕರೆ ಬಂದಿಲ್ಲ. ಯಾವುದೇ ನೊಟೀಸ್ ಕೂಡ ಬಂದಿಲ್ಲ. ನಾನು ಕೆಲಸದ ಮೇಲೆ ಮೈಸೂರಿಗೆ ಬಂದಿದ್ದೆ.

ಯಾರೋ ನಿಮ್ಮನ್ನ ಕೇಳಿಕೊಂಡು ಬಂದಿದ್ದಾರೆ. ನಿಮ್ಮ‌ಜೊತೆ ಮಾತನಾಡಬೇಕೆಂದು ಕೇಳ್ತಿದ್ದಾರೆ ಎಂದು ಕಚೇರಿ ಸಿಬ್ಬಂದಿ ತಿಳಿಸಿದರು. ನಾನು‌ ಅವರನ್ನ ಯಾರೆಂದು ವಿಚಾರಿಸಿದೆ.

ಹೋಂ ಡಿಪಾರ್ಟಮೆಂಟ್ ನಿಂದ ಬಂದಿದ್ದೇವೆ ಎಂದು ಹೇಳಿದರು. ನಿಮ್ಮನ್ನ ಭೇಟಿಯಾಗಬೇಕು ಅಂತ ಹೇಳಿದ್ರು ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಿಳಿಸಿದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಅವರು ಈ ಹಿಂದೆ ರಾಜ್ಯ ಸರಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡಿ ದೂರು ನೀಡಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು