4:12 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

40% ಕಮಿಷನ್ ಆರೋಪ: ಪ್ರಧಾನಿ ಕಾರ್ಯಾಲಯದಿಂದ ಕರೆ?; ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ; ಭ್ರಷ್ಟರಲ್ಲಿ ಎಲ್ಲಿಲ್ಲದ ನಡುಕ.!

29/06/2022, 20:23

ಬೆಂಗಳೂರು(reporterkarnataka.com): ಪ್ರಧಾನಿ ಕಾರ್ಯಾಲಯದಿಂದ(ಪಿಎಂಒ)ಬಂದಿದೆ ಎನ್ನಲಾದ ಕರೆಯೊಂದು ದೂರದ ಬೆಂಗಳೂರಿನಲ್ಲಿ ಭಾರೀ ಕಂಪನ ಉಂಟು ಮಾಡಿದೆ. 40% ಕಮಿಷನ್ ಕುರಿತು ಗುತ್ತಿಗೆದಾರರು ಮಾಡಿರುವ ಆರೋಪದ ಬಗ್ಗೆ ಇದೀಗ  ಪ್ರಧಾನಿ ಕಾರ್ಯಾಲಯ ಕಾರ್ಯೋನ್ಮುಖವಾಗಿದೆ. ಈ ನಡುವೆ ಭ್ರಷ್ಟರಲ್ಲಿ ನಡುಕ ಉಂಟು ಮಾಡಿದೆ.

40% ಕಮಿಷನ್ ಆರೋಪ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವಾಗಲೇ ಈ ಕರೆ ಆಡಳಿತ ಪಕ್ಷದ ಬಿಜೆಪಿಯಲ್ಲಿ ಭಾರೀ ತಲ್ಲಣವನ್ನುಂಟು ಮಾಡಿದೆ. ಭ್ರಷ್ಟ ಸಚಿವರು, ಶಾಸಕರುಗಳಿಗೆ ನಿದ್ದೆ ಇಲ್ಲದ ರಾತ್ರಿಯನ್ನು ಇದು ತರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ರಾಜಕೀಯ ವೀಕ್ಷಕರು ಲೆಕ್ಕ ಹಾಕುತ್ತಾರೆ.

ಗುತ್ತಿಗೆದಾರರ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣ 

ಅವರಿಗೆ ಪ್ರಧಾನಿ ಕಾರ್ಯಾಲಯದಿಂದ ಕರೆ ಬಂದಿದೆ ಎಂಬ ಮಾಹಿತಿ ಇದೆ. ದೂರುದಾರರ ಮಾಹಿತಿ ನೀಡುವಂತೆ ಪಿಎಂಒದಿಂದ ಕೋರಲಾಗಿದೆ ಎಂದು ತಿಳಿದು ಬಂದಿದೆ.

ಪ್ರಧಾನಿ ಕಾರ್ಯಾಲಯದಿಂದ ಬಂದ ಕರೆಯಲ್ಲಿ

“ಅಧಿಕಾರಿಗಳು ನಿಮ್ಮನ್ನು ಸಂಪರ್ಕಿಸಲಿದ್ದಾರೆ. ಭ್ರಷ್ಟಾಚಾರದ ದಾಖಲೆ ನೀಡುವಂತೆ” ಸೂಚಿಸಲಾಯಿತು ಎನ್ನಲಾಗಿದೆ.

ವಿಶೇಷವೆಂದರೆ ಮೋದಿ ಬೆಂಗಳೂರಿಗೆ ಬರುವ ಮುನ್ನ ಕಳಪೆ ಕಾಮಗಾರಿಗೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯ ವರದಿ ತರಿಸಿಕೊಂಡಿತ್ತು. ಈ ಬಗ್ಗೆನೂ ತನಿಖೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತನಿಖೆಗೆ ಗೃಹ ಇಲಾಖೆಯ ತಂಡ ಬೆಂಗಳೂರಿಗೆ ಬರೋ ಸಾಧ್ಯತೆ ಇದೆ. ಗುತ್ತಿಗೆದಾರರ‌ ಸಂಘವೂ ರಾಜ್ಯ ಸರ್ಕಾರದ ವಿರುದ್ಧ ಸಾಕಷ್ಟು ಆರೋಪ ಮಾಡಿತ್ತು. ದಾಖಲೆಯನ್ನು ಸಿದ್ದಪಡಿಸಿಕೊಳ್ಳಲು ಪ್ರಧಾನಿ ಕಾರ್ಯಾಲಯ ಸೂಚಿಸಿದೆ ಎಂದು ಹೇಳಲಾಗಿದ್ದು, ಕೆಂಪಣ್ಣ ಅವರು ಪ್ರಧಾನಿ ಕಚೇರಿಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಿಎಂ ಒದಿಂದ ಬಂದಿದೆ ಎನ್ನಲಾದ  ಕರೆ ಕುರಿತು 

ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ನನಗೆ ಪ್ರಧಾನಿಯವರ ಕಚೇರಿಯಿಂದ ಕರೆ ಬಂದಿಲ್ಲ. ಯಾವುದೇ ನೊಟೀಸ್ ಕೂಡ ಬಂದಿಲ್ಲ. ನಾನು ಕೆಲಸದ ಮೇಲೆ ಮೈಸೂರಿಗೆ ಬಂದಿದ್ದೆ.

ಯಾರೋ ನಿಮ್ಮನ್ನ ಕೇಳಿಕೊಂಡು ಬಂದಿದ್ದಾರೆ. ನಿಮ್ಮ‌ಜೊತೆ ಮಾತನಾಡಬೇಕೆಂದು ಕೇಳ್ತಿದ್ದಾರೆ ಎಂದು ಕಚೇರಿ ಸಿಬ್ಬಂದಿ ತಿಳಿಸಿದರು. ನಾನು‌ ಅವರನ್ನ ಯಾರೆಂದು ವಿಚಾರಿಸಿದೆ.

ಹೋಂ ಡಿಪಾರ್ಟಮೆಂಟ್ ನಿಂದ ಬಂದಿದ್ದೇವೆ ಎಂದು ಹೇಳಿದರು. ನಿಮ್ಮನ್ನ ಭೇಟಿಯಾಗಬೇಕು ಅಂತ ಹೇಳಿದ್ರು ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಿಳಿಸಿದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಅವರು ಈ ಹಿಂದೆ ರಾಜ್ಯ ಸರಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡಿ ದೂರು ನೀಡಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು