7:25 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

400 ಕೆವಿ ವಿದ್ಯುತ್ ಲೈನಿಗೆ ಮಾಜಿ ಸಚಿವ ರಮಾನಾಥ ರೈ ವಿರೋಧ: ಭೂಗತ ಕೇಬಲ್ ವ್ಯವಸ್ಥೆ ಕಲ್ಪಿಸಲು ಆಗ್ರಹ

16/10/2023, 16:12

ಮಂಗಳೂರು(reporterkarnataka.com):ಉಡುಪಿ- ಕಾಸರಗೋಡು ಮಧ್ಯೆ ಹಾದು ಹೋಗಲಿರುವ 400 ಕೆವಿ ವಿದ್ಯುತ್ ಲೈನ್ ನಿಂದ ಸಣ್ಣ ರೈತರಿಗೆ ತೊಂದರೆಯಾಗುತ್ತಿದ್ದು, ಅವರ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 400 ಕೆವಿ ವಿದ್ಯುತ್ ಕೇಬಲ್ ನಿಂದ ಮಂಗಳೂರು ಹಾಗೂ ಬಂಟ್ವಾಳ ತಾಲೂಕಿನ ಸಣ್ಣ ಹಾಗೂ ಅತೀ ಸಣ್ಣ ರೈತರ ಜಮೀನುಗಳಿಗೆ ತೊಂದರೆಯಾಗುತ್ತಿದೆ.

ಅದಕ್ಕೆ ಪರ್ಯಾಯ ವ್ಯವಸ್ಥೆ ಆಗಬೇಕು. ಅವರ ಈ ಹೋರಾಟಕ್ಕೆ ನನ್ನ ಬೆಂಬಲ ಇದೆ.
ಇದು 900 ಕೋಟಿ ರೂ.ಗಳ ಯೋಜನೆಯಾಗಿದೆ. ಇದರಿಂದ ಈಗಾಗಲೇ ಹಲವಾರು ಪಾಲುದಾರರು ಶ್ರೀಮಂತರಾಗಿದ್ದಾರೆ. ಅವರು ಮನಸ್ಸು ಮಾಡಿದರೆ ದೊಡ್ಡ ವಿಷಯವಲ್ಲ, ಸರಕಾರ, ಜಿಲ್ಲಾಡಳಿತ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂದು ಅವರು ಹೇಳಿದರು.
ಜಮೀನಿನ ಮೇಲೆ ಹೈಟೆನ್ಶನ್ ತಂತಿ ಎಳೆಯುವ ಬದಲು
ಭೂಗತ ಕೇಬಲ್ ಹಾಕಿ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಿ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು